ತೆಲಂಗಾಣದ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಂದ ಪ್ರಧಾನಿಗೆ ಮನವಿ
ಭಾಗ್ಯನಗರ (ತೆಲಂಗಾಣ) – ಈಗ ಪಾಕಿಸ್ತಾನವನ್ನು ಪುನಃ ಎರಡು ಭಾಗಗಳಾಗಿ ವಿಭಜಿಸುವ ಸಮಯ ಬಂದಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಭಾರತದೊಂದಿಗೆ ವಿಲೀನಗೊಳಿಸುವಂತೆ ನಾನು ಪ್ರಧಾನಿ ಮೋದಿಯವರಲ್ಲಿ ಮನವಿ ಮಾಡುತ್ತೇನೆ. ನಾವೆಲ್ಲರೂ ನಿಮ್ಮೊಂದಿಗೆ ಇದ್ದೇವೆ, ಎಂದು ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ತೆಲಂಗಾಣದ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಮನವಿ ಮಾಡಿದ್ದಾರೆ. ಅವರು ಇಲ್ಲಿ ನಡೆದ ಮೇಣದಬತ್ತಿ ಮೆರವಣಿಗೆಯ ಸಂದರ್ಭದಲ್ಲಿ ಮಾತನಾಡುತ್ತಿದ್ದರು. ಎ.ಐ.ಎಂ.ಐ.ಎಂ.ನ (ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್,ನ, ಅಖಿಲ ಭಾರತೀಯ ಮುಸ್ಲಿಂ ಏಕತಾ ಸಂಘ) ಸಂಸದ ಅಸಾದುದ್ದೀನ್ ಓವೈಸಿ ಇದರಲ್ಲಿ ಭಾಗವಹಿಸಿದ್ದರು.
ವರ್ಷ1971 ರಲ್ಲಿ ಪಾಕಿಸ್ತಾನವು ಭಾರತದ ಮೇಲೆ ದಾಳಿ ಮಾಡಿದಾಗ, ಇಂದಿರಾ ಗಾಂಧಿ ಅವರು ಅದಕ್ಕೆ ಸೂಕ್ತ ಉತ್ತರ ನೀಡಿ ಪಾಕಿಸ್ತಾನವನ್ನು ಎರಡು ಭಾಗಗಳಾಗಿ ಮಾಡಿದರು ಎಂದು ರೇವಂತ್ ರೆಡ್ಡಿ ಹೇಳಿದರು. ಇಂದಿಗೂ ನಾವು ಪಾಕಿಸ್ತಾನದ ವಿರುದ್ಧ ಇದೇ ರೀತಿಯ ಕ್ರಮ ಕೈಗೊಳ್ಳಬೇಕಾಗಿದೆ ಎಂದರು.