
ನವದೆಹಲಿ – ಭಾರತೀಯ ನೌಕಾಪಡೆಯು ಅರಬ್ಬೀ ಸಮುದ್ರದಲ್ಲಿ ಯುದ್ಧನೌಕೆಗಳಿಂದ ಅನೇಕ ಕ್ಷಿಪಣಿಗಳ ಯಶಸ್ವಿ ಪರೀಕ್ಷೆಯನ್ನು ನಡೆಸಿತು. ನಾವು ಹಗಲು ರಾತ್ರಿ ದೇಶವನ್ನು ರಕ್ಷಿಸಲು ಸಿದ್ಧರಿದ್ದೇವೆ ಎಂದು ನೌಕಾಪಡೆ ತಿಳಿಸಿದೆ. ಸಮುದ್ರದಲ್ಲಿ ಎಲ್ಲಿಯೇ ಅಪಾಯವಿದ್ದರೂ, ನಾವು ಅದನ್ನು ಸುಲಭವಾಗಿ ಎದುರಿಸಬಹುದು, ಎಂದು ಹೇಳಿದೆ.
ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನದಿಂದ ಸತತ ಮೂರನೇ ದಿನ ಗುಂಡಿನ ದಾಳಿ

ಪಾಕಿಸ್ತಾನವು ಗಡಿ ನಿಯಂತ್ರಣ ರೇಖೆಯಲ್ಲಿ ಸತತ ಮೂರನೇ ದಿನ ಗುಂಡಿನ ದಾಳಿ ನಡೆಸಿದೆ. ತೂತಮಾರಿ ಗಲಿ ಮತ್ತು ರಾಮ್ಪುರ ವಲಯದಲ್ಲಿ ಈ ಗುಂಡಿನ ದಾಳಿ ನಡೆದಿದೆ. ಇದಕ್ಕೆ ಭಾರತೀಯ ಸೇನೆಯೂ ಪ್ರತಿದಾಳಿ ನಡೆಸಿದೆ. ಇದರಲ್ಲಿ ಯಾವುದೇ ಜೀವ ಅಥವಾ ಆಸ್ತಿ ಹಾನಿ ಸಂಭವಿಸಿದ ವರದಿಯಾಗಿಲ್ಲ. ಮತ್ತೊಂದೆಡೆ, ಭಾರತ ಸರಕಾರವು ಪಾಕಿಸ್ತಾನಿ ಸುದ್ದಿ ವಾಹಿನಿಗಳ ಸಾಮಾಜಿಕ ಮಾಧ್ಯಮ ಪುಟಗಳನ್ನು ನಿಷೇಧಿಸಿದೆ.
ಕಾಶ್ಮೀರದಲ್ಲಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ

ಕಾಶ್ಮೀರದ ಬಡ್ಗಾಮ್ನಲ್ಲಿ ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ತಾಹೀರ್ ಅಹ್ಮದ್ ಕುಮಾರ್ ಮತ್ತು ಶಬೀರ್ ಅಹ್ಮದ್ ಗನೈ ಅವರ ಹೆಸರುಗಳು. ಇಬ್ಬರೂ ಭಯೋತ್ಪಾದಕರಿಗೆ ಸಹಾಯ ಮಾಡಿದ್ದರು ಮತ್ತು ಸ್ಥಳೀಯ ಯುವಕರನ್ನು ಭಯೋತ್ಪಾದಕ ಸಂಘಟನೆಗಳಿಗೆ ಸೇರಲು ಪ್ರೇರೇಪಿಸುತ್ತಿರುವುದು ತಿಳಿದುಬಂದಿದೆ.
ಸ್ವದೇಶವೇ ಸರ್ವಸ್ವ !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers