Impose President Rule in 2 States : ಕಾಶ್ಮೀರ ಮತ್ತು ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಿ! – ಹಿಂದೂ ಮಕ್ಕಲ ಕಚ್ಚಿ

ಕೊಯಂಬತ್ತೂರಿನಲ್ಲಿ ಸಂಘಟನೆಯಿಂದ ಪ್ರತಿಭಟನೆ

ಸಾಂದರ್ಭಿಕ ಚಿತ್ರ
ಮೆರವಣಿಗೆಯಲ್ಲಿ ಭಾಗವಹಿಸಿರುವ ಬ್ರಾಹ್ಮಣ ಸಮುದಾಯದ ನಾಗರಿಕರು

ಕೊಯಂಬತ್ತೂರು (ತಮಿಳುನಾಡು) – ‘ಹಿಂದೂ ಮಕ್ಕಲ ಕಚ್ಚಿ’ಯಿಂದ (ಹಿಂದೂ ಜನತಾ ಪಕ್ಷ) ತಮಿಳುನಾಡಿನ ವಿವಿಧೆಡೆ ಪಶ್ಚಿಮ ಬಂಗಾಳದಲ್ಲಿ ವಕ್ಫ್ ಕಾಯಿದೆಯ ಹೆಸರಿನಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿ ಮತ್ತು ಕಾಶ್ಮೀರದ ಭಯೋತ್ಪಾದಕ ದಾಳಿಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು. ಕೊಯಂಬತ್ತೂರಿನಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ ನಂತರ ಮಾತನಾಡಿದ ‘ಹಿಂದೂ ಮಕ್ಕಲ ಕಚ್ಚಿ’ಯ ಅಧ್ಯಕ್ಷ ಅರ್ಜುನ ಸಂಪತ ಅವರು ಪಶ್ಚಿಮ ಬಂಗಾಳದಲ್ಲಿ ವಕ್ಫ್ ಕಾಯಿದೆಯ ಹೆಸರಿನಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿದರು. ಹಾಗೆಯೇ ಜಮ್ಮು ಮತ್ತು ಕಾಶ್ಮೀರದ ಭಯೋತ್ಪಾದಕ ದಾಳಿಯನ್ನು ಸಹ ಅವರು ಖಂಡಿಸಿದರು. ಪಶ್ಚಿಮ ಬಂಗಾಳ ಮತ್ತು ಕಾಶ್ಮೀರ ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆಂದು ಅವರು ಒತ್ತಾಯಿಸಿದರು. ಪಾಕಿಸ್ತಾನದ ವಿರುದ್ಧ ಯುದ್ಧ ಘೋಷಿಸಬೇಕು ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಭಾರತಕ್ಕೆ ಸೇರಿಸಿಕೊಳ್ಳಬೇಕು ಎಂದು ಅರ್ಜುನ ಸಂಪತ ಈ ಸಂದರ್ಭದಲ್ಲಿ ಆಗ್ರಹಿಸಿದರು. ತಮಿಳುನಾಡು ಪೊಲೀಸರು ಪ್ರತಿಭಟನೆ ನಡೆಸುತ್ತಿದ್ದ ‘ಹಿಂದೂ ಮಕ್ಕಲ ಕಚ್ಚಿ’ಯ ಅಧ್ಯಕ್ಷ ಅರ್ಜುನ ಸಂಪತ ಮತ್ತು ಇತರ ಪದಾಧಿಕಾರಿಗಳನ್ನು ಬಂಧಿಸಿದರು.

ಸಂಪಾದಕೀಯ ನಿಲುವು

ವಾಸ್ತವವಾಗಿ ಇಂತಹ ಬೇಡಿಕೆಗಳಿಗಾಗಿ ಹಿಂದುತ್ವನಿಷ್ಠ ಸಂಘಟನೆಗಳು ಪ್ರತಿಭಟನೆ ಮಾಡುವ ಪರಿಸ್ಥಿತಿ ಬರಬಾರದು. ಸರಕಾರವೇ ಸ್ವಯಂಪ್ರೇರಿತವಾಗಿ ಇಂತಹ ಕ್ರಮ ಕೈಗೊಳ್ಳುವುದು ಅಪೇಕ್ಷಿತವಾಗಿದೆ!