ಮಥುರಾ (ಉತ್ತರ ಪ್ರದೇಶ) – ಮಥುರಾದಲ್ಲಿರುವ ಶ್ರೀ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ವಿವಾದದಲ್ಲಿ ಕೇಂದ್ರ ಸರಕಾರ ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯನ್ನು ಕಕ್ಷಿದಾರರನ್ನಾಗಿ ಮಾಡಲು ಅಲಹಾಬಾದ್ ಹೈಕೋರ್ಟ್ ಹಿಂದೂ ಪಕ್ಷಗಳಿಗೆ ನೀಡಿದ ಅನುಮತಿ ಪ್ರಾಥಮಿಕವಾಗಿ ಯೋಗ್ಯ ಎನ್ನಿಸುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮಾರ್ಚ್ 5, 2025 ರಂದು ಅಲಹಾಬಾದ್ ಉಚ್ಚ ನ್ಯಾಯಾಲಯವು 2 ಪ್ರಕರಣಗಳಲ್ಲಿ ಪರಿಷ್ಕರಣೆ ಮಾಡಲು ಅನುಮತಿ ನೀಡಿತ್ತು. ಅರ್ಜಿದಾರರಿಗೆ ಕೇಂದ್ರ ಗೃಹ ಸಚಿವಾಲಯ ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯನ್ನು ಪ್ರತಿವಾದಿಗಳನ್ನಾಗಿ ಮಾಡಲು ಹೈಕೋರ್ಟ್ ಅವಕಾಶ ನೀಡಿತ್ತು. ಹೈಕೋರ್ಟ್ನ ತೀರ್ಪನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲಾಗಿತ್ತು.
Sri Krishna Janmabhoomi Case: Supreme Court backs Allahabad High Court’s decision to implead Govt & ASI!
Hindu side’s plea to treat the disputed site as a protected monument stands — Places of Worship Act won’t apply.
SC: Plaint has to be allowed.#ReclaimTemples pic.twitter.com/JOkwOPV6ei
— Sanatan Prabhat (@SanatanPrabhat) April 29, 2025
ಪ್ರಸ್ತುತ, ಶ್ರೀ ಕೃಷ್ಣ ಜನ್ಮಭೂಮಿಗೆ ಸಂಬಂಧಿಸಿದಂತೆ ವಿವಿಧ ಪಕ್ಷಗಳಿಂದ 15 ಕ್ಕೂ ಹೆಚ್ಚು ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಇವೆ.