Sri Krishna Janmabhoomi Case : ಶ್ರೀ ಕೃಷ್ಣ ಜನ್ಮಭೂಮಿ ಪ್ರಕರಣದಲ್ಲಿ ಕೇಂದ್ರ ಸರಕಾರ ಮತ್ತು ಪುರಾತತ್ವ ಇಲಾಖೆಯನ್ನು ಕಕ್ಷಿದಾರರನ್ನಾಗಿ ಮಾಡುವುದು ಯೋಗ್ಯ! – ಸುಪ್ರೀಂ ಕೋರ್ಟ್

ಮಥುರಾ (ಉತ್ತರ ಪ್ರದೇಶ) – ಮಥುರಾದಲ್ಲಿರುವ ಶ್ರೀ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ವಿವಾದದಲ್ಲಿ ಕೇಂದ್ರ ಸರಕಾರ ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯನ್ನು ಕಕ್ಷಿದಾರರನ್ನಾಗಿ ಮಾಡಲು ಅಲಹಾಬಾದ್ ಹೈಕೋರ್ಟ್ ಹಿಂದೂ ಪಕ್ಷಗಳಿಗೆ ನೀಡಿದ ಅನುಮತಿ ಪ್ರಾಥಮಿಕವಾಗಿ ಯೋಗ್ಯ ಎನ್ನಿಸುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮಾರ್ಚ್ 5, 2025 ರಂದು ಅಲಹಾಬಾದ್ ಉಚ್ಚ ನ್ಯಾಯಾಲಯವು 2 ಪ್ರಕರಣಗಳಲ್ಲಿ ಪರಿಷ್ಕರಣೆ ಮಾಡಲು ಅನುಮತಿ ನೀಡಿತ್ತು. ಅರ್ಜಿದಾರರಿಗೆ ಕೇಂದ್ರ ಗೃಹ ಸಚಿವಾಲಯ ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯನ್ನು ಪ್ರತಿವಾದಿಗಳನ್ನಾಗಿ ಮಾಡಲು ಹೈಕೋರ್ಟ್ ಅವಕಾಶ ನೀಡಿತ್ತು. ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು.

ಪ್ರಸ್ತುತ, ಶ್ರೀ ಕೃಷ್ಣ ಜನ್ಮಭೂಮಿಗೆ ಸಂಬಂಧಿಸಿದಂತೆ ವಿವಿಧ ಪಕ್ಷಗಳಿಂದ 15 ಕ್ಕೂ ಹೆಚ್ಚು ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಇವೆ.