Suspected Bangladesh : ಕರ್ಣಾವತಿಯಲ್ಲಿ ಬಾಂಗ್ಲಾದೇಶಿ ನುಸುಳುಕೋರರ ಅಕ್ರಮ ನಿರ್ಮಾಣಗಳ ವಿರುದ್ಧ ಕಾರ್ಯಾಚರಣೆ

ಬಾಂಗ್ಲಾದೇಶಿ ನುಸುಳುಕೋರರ ಅಕ್ರಮ ಕಟ್ಟಡಗಳ ವಿರುದ್ಧ ಬುಲ್ಡೋಜರ್ ಕಾರ್ಯಾಚರಣೆ

ಕರ್ಣಾವತಿ (ಗುಜರಾತ್) – ಇಲ್ಲಿನ ಶಾ ಅಲಂ ಪ್ರದೇಶದ ಬಳಿಯ ಚಂಡೊಲಾ ಸರೋವರದ ಪ್ರದೇಶದಲ್ಲಿ ಬಾಂಗ್ಲಾದೇಶಿ ನುಸುಳುಕೋರರ ಅಕ್ರಮ ಕಟ್ಟಡಗಳ ವಿರುದ್ಧ ಬುಲ್ಡೋಜರ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಇಲ್ಲಿ 50 ಬುಲ್ಡೋಜರ್‌ಗಳನ್ನು ನಿಯೋಜಿಸಲಾಗಿದೆ. ಈ ಕ್ರಮದ ವಿರುದ್ಧ ಗುಜರಾತ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಕಾನೂನು ಕಾರ್ಯವಿಧಾನಗಳು ಮತ್ತು ನಿಯಮಗಳನ್ನು ಪಾಲಿಸದೆ ಇರುವುದರಿಂದ ಈ ಕೆಡವುವ ಕಾರ್ಯವನ್ನು ನಡೆಸಲಾಗುತ್ತಿದೆ ಎಂದು ನಿವಾಸಿಗಳು ನ್ಯಾಯಾಲಯದಲ್ಲಿ ಹೇಳಿದ್ದಾರೆ. “ಇಲ್ಲಿ ವಾಸಿಸುವ ಜನರು ಬಾಂಗ್ಲಾದೇಶಿಯರು ಎಂದು ಸಾಬೀತುಪಡಿಸಲು ಯಾವುದೇ ದೃಢವಾದ ಪುರಾವೆಗಳನ್ನು ಪ್ರಸ್ತುತಪಡಿಸಿಲ್ಲ” ಎಂದು ಅರ್ಜಿದಾರರು ವಾದಿಸಿದರು.

ಕಳೆದ 2 ದಿನಗಳಲ್ಲಿ, ಪೊಲೀಸರು ಈ ಪ್ರದೇಶದಿಂದ 890 ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ. ಈ ಪೈಕಿ 143 ಜನರು ಬಾಂಗ್ಲಾದೇಶಿ ನಾಗರಿಕರು ಎಂದು ಗುರುತಿಸಲಾಗಿದೆ. ಪಹಲ್ಗಾಮ್‌ನಲ್ಲಿನ ದಾಳಿಯ ನಂತರ ಈ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.

ಸಂಪಾದಕೀಯ ನಿಲುವು

ಬಾಂಗ್ಲಾದೇಶಿ ನುಸುಳುಕೋರರು ಇಲ್ಲಿ ನಿರ್ಮಾಣ ಕಾರ್ಯ ಮಾಡುವವರೆಗೂ ಆಡಳಿತ ಮತ್ತು ಪೊಲೀಸರು ನಿದ್ರಿಸುತ್ತಿದ್ದರೇ?