Terror Attack Condemned : ಹಿಂದೂಗಳು ಹಿಂದೂಗಳ ಬೆಂಬಲಕ್ಕೆ ನಿಲ್ಲಬೇಕು! – ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ

  • ಪಹಲ್ಗಾಮ್ ಭಯೋತ್ಪಾದಕ ದಾಳಿಯ ಪ್ರಕರಣ

  • ೨೬ ಕುಟುಂಬಗಳಿಗೆ ಶೃಂಗೇರಿ ಶಾರದಾ ಪೀಠದಿಂದ ತಲಾ ೨ ಲಕ್ಷ ರೂಪಾಯಿಗಳ ಸಹಾಯ!

ಚಿಕ್ಕಮಗಳೂರು – ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಪೀಠದ ಉತ್ತರಾಧಿಕಾರಿ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ ಖಂಡಿಸಿದ್ದಾರೆ. ಈ ದಾಳಿಯಲ್ಲಿ ಮೃತಪಟ್ಟ ೨೬ ಜನರ ಕುಟುಂಬಗಳಿಗೆ ಶೃಂಗೇರಿ ಮಠದಿಂದ ತಲಾ ೨ ಲಕ್ಷ ರೂಪಾಯಿಗಳ ಸಹಾಯವನ್ನು ಪ್ರಸಾದ ರೂಪದಲ್ಲಿ ನೀಡಲಾಗುವುದು ಎಂದು ಸ್ವಾಮೀಜಿಯವರು ಇತ್ತೀಚೆಗೆ ಘೋಷಿಸಿದರು.

ಅಕ್ಷಯ ತೃತೀಯದ ನಿಮಿತ್ತ ಮಾರ್ಗದರ್ಶನ ನೀಡುವಾಗ ಸ್ವಾಮೀಜಿಯವರು ಮಾತನಾಡಿ, “ಭಯೋತ್ಪಾದಕರ ದಾಳಿಯಲ್ಲಿ ೨೬ ಕುಟುಂಬಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಮೃತರ ಕುಟುಂಬಗಳು ದುಃಖದಲ್ಲಿವೆ. ಹಿಂದೂಗಳು ಹಿಂದೂಗಳ ಬೆಂಬಲಕ್ಕೆ ನಿಲ್ಲಬೇಕು; ಅದಕ್ಕಾಗಿಯೇ ಶೃಂಗೇರಿ ಶಾರದಾ ಪೀಠದ ವತಿಯಿಂದ ಪ್ರತಿ ಕುಟುಂಬಕ್ಕೆ ೨ ಲಕ್ಷ ರೂಪಾಯಿಗಳನ್ನು ಪ್ರಸಾದ ರೂಪದಲ್ಲಿ ನೀಡುತ್ತಿದ್ದೇವೆ. ಮಠದ ಆಡಳಿತಾಧಿಕಾರಿಗಳು ಈ ಸಹಾಯವನ್ನು ಸಂಬಂಧಪಟ್ಟ ಕುಟುಂಬಗಳಿಗೆ ತಲುಪಿಸುತ್ತಾರೆ” ಎಂದು ತಿಳಿಸಿದರು.