ಮೈಸೂರು – ಕೆಲವು ದಿನಗಳ ಹಿಂದೆ ಬೆಳಗಾವಿಯ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ ವರಿಷ್ಠಾಧಿಕಾರಿಯೊಬ್ಬರ ಮೇಲೆ ಕೈ ಎತ್ತಿದ ಘಟನೆ ತೀವ್ರ ಚರ್ಚೆಯಲ್ಲಿದೆ. ಈ ಘಟನೆಯ ವಿಡಿಯೋ ಮಾಡಿದ ಪೊಲೀಸ ಪೇದೆಯನ್ನು ಅಮಾನತು ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿಂದನೆ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟ ಆರೋಪದ ಮೇಲೆ ಮೈಸೂರು ಕೇಂದ್ರ ಕಾರಾಗೃಹದ ಸಿಬ್ಬಂದಿ ಎಚ್.ಎನ್. ಮಧು ಕುಮಾರ ಅವರನ್ನು ಅಮಾನತು ಮಾಡುವಂತೆ ಕಾರಾಗೃಹದ ಮುಖ್ಯ ಅಧೀಕ್ಷಕ ಪಿ.ಎಸ್. ರಮೇಶ ಆದೇಶಿಸಿದ್ದಾರೆ.
ಎಚ್.ಎನ್. ಮಧು ಕುಮಾರ ಅವರು ಏಪ್ರಿಲ್ 28 ರಂದು ವಿಡಿಯೋ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿತು. ನಂತರ ಅವರನ್ನು ತಕ್ಷಣವೇ ಅಮಾನತು ಮಾಡಲಾಯಿತು.
ಸಂಪಾದಕೀಯ ನಿಲುವುತಪ್ಪು ಮಾಡಿದವನನ್ನು ಅಲ್ಲ, ತಪ್ಪನ್ನು ಬಹಿರಂಗಪಡಿಸಿದವನನ್ನು ಅಮಾನತು ಮಾಡುವುದು, ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದಂತೆ ಇದೆ. ರಾಜ್ಯದ ಕಾಂಗ್ರೆಸ್ಸಿನ ಜನವಿರೋಧಿ ಆಡಳಿತದಲ್ಲಿ ಇನ್ನೇನು ನಿರೀಕ್ಷಿಸಲು ಸಾಧ್ಯ? ಇದರಿಂದ ಕಾಂಗ್ರೆಸ್ ಆಡಳಿತವು ಸರ್ವಾಧಿಕಾರಿ ಧೋರಣೆಯಿಂದ ನಡೆಸಲಾಗುತ್ತದೆ ಎಂಬುದು ಸ್ಪಷ್ಟವಾಗುತ್ತದೆ. ಈ ಬಗ್ಗೆ ಪ್ರಜಾಪ್ರಭುತ್ವವಾದಿಗಳು ಈಗ ಏಕೆ ಮಾತನಾಡುತ್ತಿಲ್ಲ? |