ಆಪರೇಷನ್ ಸಿಂಧೂರ ಯಶಸ್ಸು!

ನವದೆಹಲಿ – ಭಾರತವು ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ‘ಆಪರೇಷನ್ ಸಿಂಧೂರ’ದ ಅಡಿಯಲ್ಲಿ ನಡೆಸಿದ ದಾಳಿಯಲ್ಲಿ ಜೈಶ್-ಎ-ಮೊಹಮ್ಮದ್ನ ಕುಖ್ಯಾತ ಭಯೋತ್ಪಾದಕ ಅಬ್ದುಲ್ ರೌಫ್ ಅಜರ್ ಹತನಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ರೌಫ್ ಅಜರ್ ಜೈಶ್ನ ಮುಖ್ಯಸ್ಥ ಮಸೂದ್ ಅಜರ್ನ ಕಿರಿಯ ಸಹೋದರ. 1999 ರಲ್ಲಿ ಭಾರತದ ಇಂಡಿಯನ್ ಏರ್ಲೈನ್ಸ್ ವಿಮಾನವನ್ನು ಅಪಹರಿಸಿ ಅಫ್ಘಾನಿಸ್ತಾನದ ಕಂದಹಾರ್ಗೆ ಕೊಂಡೊಯ್ಯುವ ಪಿತೂರಿಯಲ್ಲಿ ಅವನು ಪ್ರಮುಖ ಸೂತ್ರಧಾರನಾಗಿದ್ದನು. ಈ ದಾಳಿಯಲ್ಲಿ ಮಸೂದ್ ಅಜರ್ನ 10 ಸಂಬಂಧಿಕರು ಮತ್ತು 4 ಆಪ್ತ ಸಹಚರರು ಈ ಹಿಂದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ರೌಫ್ಗೆ ಪಾಕಿಸ್ತಾನದ ಸೇನೆ ಮತ್ತು ಗುಪ್ತಚರ ಸಂಸ್ಥೆ ಐಎಸ್ಐ ಬಹಳ ಕಾಲದಿಂದ ರಕ್ಷಣೆ ನೀಡುತ್ತಿತ್ತು. 2010 ರಲ್ಲಿ ಅಮೆರಿಕವು ಅವನ ಮೇಲೆ ನಿರ್ಬಂಧಗಳನ್ನು ವಿಧಿಸಿತ್ತು. ವಿಶ್ವಸಂಸ್ಥೆಯ ಜಾಗತಿಕ ಭಯೋತ್ಪಾದಕರ ಪಟ್ಟಿಯಲ್ಲಿ ಅವನನ್ನು ಸೇರಿಸಲು ಭಾರತ ಪದೇ ಪದೇ ಮಾಡಿದ ಪ್ರಯತ್ನಗಳನ್ನು ಚೀನಾ ತನ್ನ ವೀಟೋ ಅಧಿಕಾರವನ್ನು ಬಳಸಿ ತಿರಸ್ಕರಿಸಿತ್ತು.
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ