ಆಪರೇಷನ್ ಸಿಂಧೂರ ಯಶಸ್ಸು!

ನವದೆಹಲಿ – ಭಾರತವು ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ‘ಆಪರೇಷನ್ ಸಿಂಧೂರ’ದ ಅಡಿಯಲ್ಲಿ ನಡೆಸಿದ ದಾಳಿಯಲ್ಲಿ ಜೈಶ್-ಎ-ಮೊಹಮ್ಮದ್ನ ಕುಖ್ಯಾತ ಭಯೋತ್ಪಾದಕ ಅಬ್ದುಲ್ ರೌಫ್ ಅಜರ್ ಹತನಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ರೌಫ್ ಅಜರ್ ಜೈಶ್ನ ಮುಖ್ಯಸ್ಥ ಮಸೂದ್ ಅಜರ್ನ ಕಿರಿಯ ಸಹೋದರ. 1999 ರಲ್ಲಿ ಭಾರತದ ಇಂಡಿಯನ್ ಏರ್ಲೈನ್ಸ್ ವಿಮಾನವನ್ನು ಅಪಹರಿಸಿ ಅಫ್ಘಾನಿಸ್ತಾನದ ಕಂದಹಾರ್ಗೆ ಕೊಂಡೊಯ್ಯುವ ಪಿತೂರಿಯಲ್ಲಿ ಅವನು ಪ್ರಮುಖ ಸೂತ್ರಧಾರನಾಗಿದ್ದನು. ಈ ದಾಳಿಯಲ್ಲಿ ಮಸೂದ್ ಅಜರ್ನ 10 ಸಂಬಂಧಿಕರು ಮತ್ತು 4 ಆಪ್ತ ಸಹಚರರು ಈ ಹಿಂದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ರೌಫ್ಗೆ ಪಾಕಿಸ್ತಾನದ ಸೇನೆ ಮತ್ತು ಗುಪ್ತಚರ ಸಂಸ್ಥೆ ಐಎಸ್ಐ ಬಹಳ ಕಾಲದಿಂದ ರಕ್ಷಣೆ ನೀಡುತ್ತಿತ್ತು. 2010 ರಲ್ಲಿ ಅಮೆರಿಕವು ಅವನ ಮೇಲೆ ನಿರ್ಬಂಧಗಳನ್ನು ವಿಧಿಸಿತ್ತು. ವಿಶ್ವಸಂಸ್ಥೆಯ ಜಾಗತಿಕ ಭಯೋತ್ಪಾದಕರ ಪಟ್ಟಿಯಲ್ಲಿ ಅವನನ್ನು ಸೇರಿಸಲು ಭಾರತ ಪದೇ ಪದೇ ಮಾಡಿದ ಪ್ರಯತ್ನಗಳನ್ನು ಚೀನಾ ತನ್ನ ವೀಟೋ ಅಧಿಕಾರವನ್ನು ಬಳಸಿ ತಿರಸ್ಕರಿಸಿತ್ತು.
ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
ಕೇರಳಕ್ಕೆ ಮುಂಗಾರು ಮಳೆಯು ಆಗಮನ !
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !