ಜಮ್ಮು-ಕಾಶ್ಮೀರ – ನಿನ್ನೆ ಸಂಜೆ 5 ಗಂಟೆಗೆ ಘೋಷಣೆಯಾಗಿದ್ದ ಕದನ ವಿರಾಮವನ್ನು ಉಲ್ಲಂಘಿಸಿ ಪಾಕಿಸ್ತಾನವು ರಾತ್ರಿ ಜಮ್ಮು ಮತ್ತು ಕಾಶ್ಮೀರದ ಗಡಿ ಭಾಗದಲ್ಲಿ ಡ್ರೋನ್ ದಾಳಿ ನಡೆಸಿದೆ. ಖಚಿತ ಮಾಹಿತಿ ಪ್ರಕಾರ, ಅಂತರಾಷ್ಟ್ರೀಯ ಗಡಿಯ ಸಮೀಪದ ಭಾರತೀಯ ಸೇನಾ ನೆಲೆಗಳನ್ನು ಗುರಿಯಾಗಿಸಿ ಈ ದಾಳಿ ನಡೆದಿದೆ. ಡ್ರೋನ್ನಿಂದ ಸ್ಪೋಟ ಸಂಭವಿಸಿದ ಪರಿಣಾಮವಾಗಿ ಸಣ್ಣ ಪ್ರಮಾಣದ ಹಾನಿ ಸಂಭವಿಸಿದೆ ಎಂದು ವರದಿಯಾಗಿದೆ.
ಈ ಕೃತ್ಯವನ್ನು ಭಾರತವು ತೀವ್ರವಾಗಿ ಖಂಡಿಸಿದ್ದು, ಇದು ಕದನ ವಿರಾಮ ಒಪ್ಪಂದದ ಸ್ಪಷ್ಟ ಉಲ್ಲಂಘನೆ ಎಂದು ಹೇಳಿದೆ. ಗಡಿಯನ್ನು ರಕ್ಷಿಸಲು ಭಾರತೀಯ ಸೇನೆ ಸನ್ನದ್ಧವಾಗಿದೆ ಮತ್ತು ಸೂಕ್ತ ಸಮಯದಲ್ಲಿ ತಕ್ಕ ಪ್ರತ್ಯುತ್ತರ ನೀಡಲಾಗುವುದು ಎಂದು ತಿಳಿಸಿದೆ. ಭಾರತವು ಈ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿದ್ದು, ಮುಂದಿನ ಕ್ರಮಗಳ ಬಗ್ಗೆ ಚಿಂತನೆ ನಡೆಸುತ್ತಿದೆ.