
ಮುಂಬಯಿ – ಪಾಕಿಸ್ತಾನ ಮೋಸ ಮಾಡಿದೆ. ಪಾಕಿಸ್ತಾನ ಈ ಹಿಂದೆ ಹಲವು ಬಾರಿ ಕದನ ವಿರಾಮವನ್ನು ಉಲ್ಲಂಘಿಸಿದೆ. ಪಾಕಿಸ್ತಾನ ನಮ್ಮ ನಾಗರಿಕರ ಮೇಲೆ ದಾಳಿ ಮಾಡಿದೆ; ಆದರೆ ಇದಕ್ಕೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಲಾಗಿದೆ. ಪಾಕಿಸ್ತಾನ ಮತ್ತೆ ದಾಳಿ ಮಾಡುತ್ತದೆ ಎಂದು ಭಾರತೀಯ ಸೇನೆಗೆ ತಿಳಿದಿತ್ತು. ಅದಕ್ಕಾಗಿಯೇ ಪ್ರಧಾನಿಯವರು ಅದರ ಬಗ್ಗೆ ಯಾವುದೇ ‘ಪೋಸ್ಟ್’ ಮಾಡಲಿಲ್ಲ. ಪಾಕಿಸ್ತಾನ ಪದೇ ಪದೇ ಈ ಕೆಲಸಗಳನ್ನು ಮಾಡುತ್ತಿದ್ದರೆ, ಅದಕ್ಕೆ ತಕ್ಕ ಪಾಠ ಕಲಿಸಲಾಗುವುದು. ನಾಯಿಯ ಬಾಲ ಡೊಂಕಾಗಿದ್ದರೆ ಅದನ್ನು ಕತ್ತರಿಸಲಾಗುತ್ತದೆ. ಸಮಯ ಬಂದಾಗ ಪ್ರಧಾನಿಯವರು ಅದನ್ನೂ ಮಾಡುತ್ತಾರೆ. ಪಾಕಿಸ್ತಾನ ತನ್ನ ಸಾಮರ್ಥ್ಯದಂತೆ ಇರಬೇಕು; ಇಲ್ಲದಿದ್ದರೆ ನಕ್ಷೆಯಿಂದ ಅದರ ಹೆಸರನ್ನು ಅಳಿಸುವ ಸಾಮರ್ಥ್ಯ ಭಾರತಕ್ಕಿದೆ ಎಂದು ಉಪಮುಖ್ಯಮಂತ್ರಿ ಏಕನಾಥ ಶಿಂದೆ ಹೇಳಿದ್ದಾರೆ. ಅವರು ಇಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು.
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ