ಬ್ರಹ್ಮೋಸ್ನಿಂದ ಪಾಕ್ ವಾಯುನೆಲೆಗಳಿಗೆ ಹಾನಿ

ನವ ದೆಹಲಿ – ಭಾರತವು ‘ಆಪರೇಷನ್ ಸಿಂದೂರ್’ ಮೂಲಕ ಪಾಕಿಸ್ತಾನಕ್ಕೆ ಭಾರಿ ಹಾನಿ ಮಾಡಿದೆ ಎಂಬ ಮಾಹಿತಿ ಈಗ ಬೆಳಕಿಗೆ ಬರುತ್ತಿದೆ. ಭಾರತವು ಪಾಕಿಸ್ತಾನದ ವಾಯು ರಕ್ಷಣಾ ವ್ಯವಸ್ಥೆಯನ್ನು ನಾಶಪಡಿಸುವುದರ ಜೊತೆಗೆ ಪಾಕಿಸ್ತಾನದ ವಾಯುಪಡೆಯ 11 ನೆಲೆಗಳನ್ನು ಧ್ವಂಸಗೊಳಿಸಿದೆ. ಈ ಕಾರ್ಯಾಚರಣೆಗಾಗಿ ಭಾರತವು ಮೊದಲ ಬಾರಿಗೆ ಬ್ರಹ್ಮೋಸ್ ಕ್ಷಿಪಣಿಗಳನ್ನು ಬಳಸಿತು ಮತ್ತು ಅದರ ಪರಿಣಾಮವು ಬಹಳ ದೊಡ್ಡದಾಗಿದೆ ಎಂದು ರಕ್ಷಣಾ ತಜ್ಞರು ಹೇಳುತ್ತಿದ್ದಾರೆ. ಬ್ರಹ್ಮೋಸ್ನಿಂದ ಪಾಕಿಸ್ತಾನದ ವಾಯುನೆಲೆಗಳಿಗೆ ಭಾರಿ ಹಾನಿಯಾದ ವಿಡಿಯೊಗಳು ಈಗ ಹೊರಬರುತ್ತಿವೆ.
ಬ್ರಹ್ಮೋಸ್ ಕ್ಷಿಪಣಿಯೊಂದಿಗೆ ‘ಸ್ಕ್ಯಾಲ್ಪ್’ ಮತ್ತು ‘ಹ್ಯಾಮರ್’ ನಂತಹ ಗಾಳಿಯಲ್ಲೇ ನಿಖರವಾದ ದಾಳಿ ನಡೆಸುವ ಆಧುನಿಕ ಶಸ್ತ್ರಾಸ್ತ್ರಗಳನ್ನು ಸಹ ಬಳಸಲಾಯಿತು. ಪಾಕಿಸ್ತಾನದ ಸ್ಕಾರ್ದು, ಮುರೀದ, ರಫೀಕಿ, ನೂರ ಖಾನ, ಚುನಿಯಾ, ಸುಕ್ಕೂರ ಮುಂತಾದ ವಾಯುನೆಲೆಗಳು ಮತ್ತು ಸಿಯಾಲಕೋಟ ಹಾಗೂ ಪಸರೂರನ ರಾಡಾರ್ ನೆಲೆಗಳಿಗೆ ಹಾನಿ ಮಾಡಲಾಗಿದೆ. ಬ್ರಹ್ಮೋಸ್ ಅನ್ನು ಭಾರತ ಮತ್ತು ರಷ್ಯಾ ಜಂಟಿಯಾಗಿ ಅಭಿವೃದ್ಧಿಪಡಿಸಿವೆ. ಭಾರತದಿಂದ ವಿಯೆಟ್ನಾಂ ಮತ್ತು ಫಿಲಿಪ್ಪೀನ್ಸ್ ದೇಶಗಳು ಸಹ ಬ್ರಹ್ಮೋಸ್ ಅನ್ನು ಖರೀದಿಸಿವೆ.
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !
ಸ್ವಂತ ಪಕ್ಷ ಸ್ಥಾಪಿಸಲು ಮುಂದಾದ ಭಾಜಪ ತಮಿಳುನಾಡಿನ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ!
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ