|

ಸಿಂಧುದುರ್ಗ – ಜಿಲ್ಲೆಯ ಮಾಲವಣ ತಾಲೂಕಿನ ರಾಜಕೋಟ್ ನಲ್ಲಿ ಸ್ಥಾಪಿಸಲಾಗಿದ್ದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯು ಕೆಲವು ತಿಂಗಳ ಹಿಂದೆ ಹಾನಿಗೊಳಗಾಗಿತ್ತು. ಆಗಲೇ ಇಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಪ್ರತಿಮೆಯನ್ನು ಸ್ಥಾಪಿಸಲು ನಿರ್ಧರಿಸಲಾಗಿತ್ತು ಮತ್ತು ಇಂದು ಆ ಸಂಕಲ್ಪವು ಪೂರ್ಣಗೊಂಡಿದೆ. ಇಲ್ಲಿಗೆ ಬರುವವರಿಗೆ ಛತ್ರಪತಿ ಶಿವಾಜಿ ಮಹಾರಾಜರ ಸ್ವರಾಜ್ಯದ ಅನುಭವವಾಗುವ ರೀತಿಯಲ್ಲಿ ‘ಶಿವಸೃಷ್ಟಿ’ಯನ್ನು ನಿರ್ಮಿಸಿ ಪ್ರದೇಶವನ್ನು ಅಭಿವೃದ್ಧಿಪಡಿಸಲಾಗುವುದು. ಕೊಂಕಣವು ಮಹಾಮೈತ್ರಿಗೆ ಯಾವಾಗಲೂ ತುಂಬು ಹೃದಯದ ಪ್ರೀತಿಯನ್ನು ನೀಡಿದೆ. ಆದ್ದರಿಂದ ಕೊಂಕಣದ ಅಭಿವೃದ್ಧಿಗೆ ಮಹಾಮೈತ್ರಿಯ ಆದ್ಯತೆ ಇದೆ. ಕೊಂಕಣಕ್ಕೆ ಎಷ್ಟು ನೀಡಲು ಸಾಧ್ಯವೋ ಅಷ್ಟು ನೀಡಲು ಪ್ರಯತ್ನಿಸಲಾಗುವುದು, ಹಾಗೆಯೇ ಪ್ರವಾಸೋದ್ಯಮದ ಮೂಲಕ ಕೊಂಕಣದ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇಲ್ಲಿ ಹೇಳಿದ್ದಾರೆ.

ಮುಖ್ಯಮಂತ್ರಿ ಫಡ್ನವೀಸ್ ಅವರಿಂದ ಪೂಜೆ ಮತ್ತು ಛತ್ರಪತಿ ಶಿವಾಜಿ ಮಹಾರಾಜರ ಆರತಿಯನ್ನು ನೆರವೇರಿಸಿ ರಾಜಕೋಟ್ ನಲ್ಲಿ ಸ್ಥಾಪಿಸಲಾಗಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಮೇ 11 ರಂದು ಲೋಕಾರ್ಪಣೆಗೊಳಿಸಲಾಯಿತು. ನಂತರ ಗಣ್ಯರು ಇಲ್ಲಿನ ಪ್ರದೇಶವನ್ನು ವೀಕ್ಷಿಸಿದರು.


ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ