
ಪುಣೆ – ಯುದ್ಧವೆಂದರೆ ಹಿಂದಿ ಚಿತ್ರರಂಗದ ಪ್ರಣಯ (“ರೊಮ್ಯಾಂಟಿಕ್”) ಚಿತ್ರವೇನಲ್ಲ. ಯುದ್ಧವು ಬಹಳ ಗಂಭೀರವಾದ ವಿಷಯವಾಗಿದೆ. ಯುದ್ಧ ಅಥವಾ ಹಿಂಸಾಚಾರವು ಕೊನೆಯ ಉಪಾಯವಾಗಿರಬೇಕು; ಅದಕ್ಕಾಗಿಯೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದು ಯುದ್ಧದ ಕಾಲವಲ್ಲ ಎಂದು ಹೇಳಿದರು. ಕೆಲವು ಮೂರ್ಖ ಜನರು ನಮ್ಮ ಮೇಲೆ ಯುದ್ಧವನ್ನು ಹೇರಿದರೂ, ನಾವು ಅದನ್ನು ಆಚರಿಸಬಾರದು ಎಂದು ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಮನೋಜ ನರವಣೆ ಹೇಳಿದ್ದಾರೆ. ಭಾರತ-ಪಾಕಿಸ್ತಾನದ ನಡುವಿನ ಕದನ ವಿರಾಮದ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿರುವ ಮತ್ತು ಪಾಕಿಸ್ತಾನದ ವಿರುದ್ಧ ಪೂರ್ಣ ಪ್ರಮಾಣದ ಯುದ್ಧವನ್ನು ಪ್ರಾರಂಭಿಸುವಂತೆ ಸಲಹೆ ನೀಡುತ್ತಿರುವವರನ್ನು ಅವರು ಈ ರೀತಿ ಟೀಕಿಸಿದ್ದಾರೆ. ಇಲ್ಲಿನ ‘ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾ’ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಅವರು ಮಾತು ಮುಂದುವರೆಸಿ, “ಒಂದು ವೇಳೆ ನನಗೆ ಆದೇಶ ಸಿಕ್ಕಿದ್ದರೆ, ನಾನು ಖಂಡಿತವಾಗಿಯೂ ಯುದ್ಧಭೂಮಿಗೆ ಹೋಗುತ್ತಿದ್ದೆ; ಆದರೆ ರಾಜಕೀಯ ಚರ್ಚೆಯ ಮೂಲಕ ಈ ಸಮಸ್ಯೆಯನ್ನು ಪರಿಹರಿಸುವುದು ನನ್ನ ಆದ್ಯತೆಯಾಗಿದೆ. ಹೋರಾಟದಿಂದ ಗಡಿ ಪ್ರದೇಶಗಳಲ್ಲಿ ವಾಸಿಸುವ ಜನರು ತೊಂದರೆಗೀಡಾಗಿದ್ದಾರೆ. ಸಣ್ಣ ಮಕ್ಕಳು ರಾತ್ರಿ ಬಾಂಬ್ ಸ್ಫೋಟದಿಂದ ಬಂಕರ್ಗಳಲ್ಲಿ ಕಳೆಯಬೇಕಾಗಿದೆ. ಯುದ್ಧದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಆಘಾತವು ಈಗ ತಲೆಮಾರುಗಳವರೆಗೆ ಉಳಿಯುತ್ತದೆ. ‘ಪಿ ಟಿ ಎಸ್ ಡಿ’ (‘ಪೋಸ್ಟ್ ಟ್ರಾಮಾಟಿಕ್ ಸ್ಟ್ರೆಸ್ ಡಿಸಾರ್ಡರ್’) ಎಂಬ ಸಮಸ್ಯೆಯಿಂದ ಬಳಲುತ್ತಿರುವವರಿಗೆ 20 ವರ್ಷಗಳ ನಂತರವೂ ಭಯ ಮತ್ತು ಆತಂಕ ಕಾಡುತ್ತಿರುತ್ತದೆ. ಅಂತಹ ಜನರು ಅನೇಕ ಬಾರಿ ಮನೋವೈದ್ಯರ ಸಹಾಯವನ್ನು ಪಡೆಯಬೇಕಾಗುತ್ತದೆ”, ಎಂದು ಹೇಳಿದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಪ್ರಧಾನಿ ಮೋದಿ ನನಗೆ ತುಂಬಾ ಇಷ್ಟ, ಅವರು ನನ್ನ ಒಳ್ಳೆಯ ಸ್ನೇಹಿತ ! : Donald Trump
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !