‘ಮನ್ ಕಿ ಬಾತ್’ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆ

ನವದೆಹಲಿ – ಇಂದು ಪ್ರತಿಯೊಬ್ಬರೂ ದೇಶಭಕ್ತಿಯ ಭಾವನೆಗಳಿಂದ ತುಂಬಿದ್ದಾರೆ. ‘ಆಪರೇಷನ್ ಸಿಂದೂರ’ವು ಕೇವಲ ಸೈನ್ಯ ಕಾರ್ಯಾಚರಣೆಯಾಗಿರದೇ ನಮ್ಮ ದೃಢ ಸಂಕಲ್ಪ, ಧೈರ್ಯ ಮತ್ತು ಬದಲಾಗುತ್ತಿರುವ ಭಾರತದ ಚಿತ್ರಣವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ ಆಕಾಶವಾಣಿಯ ಮಾಸಿಕ ‘ಮನ ಕಿ ಬಾತ’ ಕಾರ್ಯಕ್ರಮದ 122 ನೇ ಸಂಚಿಕೆಯಲ್ಲಿ ಹೇಳಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾತು ಮುಂದುವರೆಸಿ,
1. ಇಡೀ ದೇಶವೇ ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಾಗಿರುವುದನ್ನು ಕಾಣಬಹುದು. ಪ್ರತಿಯೊಬ್ಬರಿಗೂ ಭಯೋತ್ಪಾದನೆ ಕೊನೆಗೊಳ್ಳಬೇಕು ಎಂದು ಅನಿಸುತ್ತಿತ್ತು. ನಮ್ಮ ಸೈನ್ಯವು ಗಡಿಯ ಆಚೆಗಿನ ಭಯೋತ್ಪಾದಕರ ನೆಲೆಗಳನ್ನು ಧ್ವಂಸಗೊಳಿಸಿತು.
2.’ಆಪರೇಷನ್ ಸಿಂದೂರ’ ಈಗ ಅನೇಕ ಭಾರತೀಯರ ಜೀವನದ ಭಾಗವಾಗಿದೆ. ಬಿಹಾರದ ಕಟಿಹಾರ, ಉತ್ತರಪ್ರದೇಶದ ಕುಶೀನಗರ ಮತ್ತು ಇತರ ಹಲವು ಸ್ಥಳಗಳಲ್ಲಿ ಜನಿಸಿದ ಮಕ್ಕಳಿಗೆ ಸಿಂದೂರ ಎಂದು ನಾಮಕರಣ ಮಾಡಲಾಗಿದೆ.
3.ಭಾರತೀಯ ಸೈನ್ಯವು ಭಯೋತ್ಪಾದಕರ ನೆಲೆಗಳನ್ನು ಧ್ವಂಸಗೊಳಿಸಿದ್ದು ಅವರ ಶೌರ್ಯವು ಅತುಲನೀಯವಾಗಿತ್ತು. ಇದಕ್ಕಾಗಿ ಅವರು ಭಾರತದಲ್ಲಿ ತಯಾರಿಸಿದ ಶಸ್ತ್ರಾಸ್ತ್ರಗಳು ಮತ್ತು ತಂತ್ರಜ್ಞಾನವನ್ನು ಬಳಸಿದರು.
4.ಮಾವೋವಾದದ ವಿರುದ್ಧ ಸಾಮೂಹಿಕ ಹೋರಾಟ ನಡೆಯುತ್ತಿದೆ ಮತ್ತು ಗಡಚಿರೋಲಿಯಂತಹ ಪ್ರದೇಶಗಳಲ್ಲಿನ ನಾಗರಿಕರಿಗೆ ಮೂಲಭೂತ ಸೌಲಭ್ಯಗಳು ತಲುಪುತ್ತಿವೆ. ಇಲ್ಲಿನ ಕಾಟೆಝಾರಿ ಗ್ರಾಮಕ್ಕೆ ಮೊದಲ ಬಾರಿಗೆ ಬಸ್ ತಲುಪಿತು. ಗ್ರಾಮಸ್ಥರು ಡೋಲು ಬಾರಿಸಿ ಬಸ್ಸನ್ನು ಸ್ವಾಗತಿಸಿದರು, ಎಂದು ಹೇಳಿದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಪ್ರಧಾನಿ ಮೋದಿ ನನಗೆ ತುಂಬಾ ಇಷ್ಟ, ಅವರು ನನ್ನ ಒಳ್ಳೆಯ ಸ್ನೇಹಿತ ! : Donald Trump
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !