
ಬೆಂಗಳೂರು – ಕಾಂಗ್ರೆಸ್ಸಿನ ಹಿರಿಯ ನಾಯಕ ಮತ್ತು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಅವರು ಸ್ವಾತಂತ್ರ್ಯವೀರ ಸಾವರಕರ ಅವರ ಜಯಂತಿಯಂದು ‘ಎಕ್ಸ್’ ನಲ್ಲಿ ಸಾವರಕರ ಅವರನ್ನು ಹೊಗಳಿ ಪೋಸ್ಟ್ ಮಾಡಿ ಕೇವಲ 2 ಗಂಟೆಗಳ ನಂತರ ಅದನ್ನು ತೆಗೆದುಹಾಕಿದರು. ಪೋಸ್ಟ್ ಮಾಡಿದ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕರು ಪ್ರತಿಕ್ರಿಯಿಸುತ್ತಾ, ‘ದೇಶಪಾಂಡೆಯವರ ದೇಹ ಕಾಂಗ್ರೆಸ್ಸಿನಲ್ಲಿದ್ದರೂ, ಆತ್ಮ ಭಾಜಪದಲ್ಲಿದೆ. ಇಂತಹ ಆತ್ಮಗಳು ಕಾಂಗ್ರೆಸ್ಸಿನಲ್ಲಿ ಬಹಳಷ್ಟಿವೆ’ ಎಂದು ಹೇಳಿಕೆಗಳನ್ನು ನೀಡಲು ಪ್ರಾರಂಭಿಸಿದ ನಂತರ ಅವರು ಪೋಸ್ಟ್ ಅನ್ನು ತೆಗೆದುಹಾಕಿದರು.
1. ಮಾಜಿ ಸಚಿವ ಶ್ರೀ ಆರ್.ವಿ. ದೇಶಪಾಂಡೆ ಅವರು ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿ, ‘ತಮ್ಮ ಇಡೀ ಜೀವನವನ್ನು ಸ್ವಾತಂತ್ರ್ಯ ಹೋರಾಟಕ್ಕಾಗಿ ಅರ್ಪಿಸಿದ ಭಾರತಮಾತೆಯ ಕ್ರಾಂತಿಕಾರಿ ಸುಪುತ್ರ ವಿನಾಯಕ ದಾಮೋದರ ಸಾವರಕರ ಅವರಿಗೆ ಜಯಂತಿಯಂದು ಶತಶಃ ನಮನಗಳು, ಯುವಕರಲ್ಲಿ ದೇಶಭಕ್ತಿಯ ಜ್ವಾಲೆಯನ್ನು ಹೊತ್ತಿಸಿದ, ಸ್ವಾಭಿಮಾನ ಮತ್ತು ಸ್ವಾತಂತ್ರ್ಯದ ಮಹತ್ವವನ್ನು ಸಾರಿದ ಇವರು ಒಬ್ಬ ಅದ್ಭುತ ದೇಶಭಕ್ತರಾಗಿದ್ದರು,’ ಎಂದು ಹೇಳಿದ್ದರು.
2. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ನಿರಂತರವಾಗಿ ಸ್ವಾತಂತ್ರ್ಯವೀರ ಸಾವರಕರ ಅವರನ್ನು ಟೀಕಿಸುತ್ತಿರುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ದೇಶಪಾಂಡೆಯವರ ಈ ಪೋಸ್ಟ್ ಚರ್ಚೆಗೆ ಗ್ರಾಸವಾಯಿತು.
ಸಂಪಾದಕೀಯ ನಿಲುವುಕಾಂಗ್ರೆಸ್ಸಿನಲ್ಲಿ ಸಾವರಕರ ಭಕ್ತರೂ ಇದ್ದಾರೆ; ಆದರೆ ಅಧಿಕಾರದ ಸ್ವಾರ್ಥ, ತತ್ವನಿಷ್ಠೆಗಾಗಿ ಹೋರಾಡುವ ಸಿದ್ಧತೆಯ ಕೊರತೆ, ಹೇಡಿತನದ ನಿಲುವುಗಳಿಂದಾಗಿ ಅವರು ಕಾಂಗ್ರೆಸ್ನಿಂದಾಗುವ ಪ್ರಖರ ದೇಶಭಕ್ತನ ಅವಮಾನವನ್ನು ಸ್ವೀಕರಿಸಿ, ತಮ್ಮ ನೈತಿಕತೆಯನ್ನೂ ಕಳೆದುಕೊಳ್ಳುತ್ತಿದ್ದಾರೆ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !