ವೇದಗಳ ಪ್ರಚಾರ ಮತ್ತು ಪ್ರಸಾರ ಮಾಡಿದ ಬ್ರೆಜಿಲ್ ನ ಜೊನಾಸ್ ಮಾಸೆಟ್ಟಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ದೊರೆತ ನಂತರದ ಉದ್ಗಾರ

ನವದೆಹಲಿ – ಇತ್ತೀಚೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮ ಪ್ರಶಸ್ತಿಗಳನ್ನು ವಿತರಿಸಿದರು. ರಾಜಕೀಯ, ಸಾಮಾಜಿಕ, ಕಲೆ, ಆಧ್ಯಾತ್ಮ, ವಿಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರಿಗೆ ಈ ಪ್ರಶಸ್ತಿಗಳನ್ನು ನೀಡಲಾಯಿತು. ಸಾಧ್ವಿ ಋತಂಬರಾ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಲಾಯಿತು ಹಾಗೂ ಬ್ರೆಜಿಲ್ ನ ವಿಶ್ವ ವಿದ್ಯಾ ಗುರುಕುಲದ ಸಂಸ್ಥಾಪಕ ಜೋನಾಸ್ ಮಾಸೆಟ್ಟಿ ಅವರಿಗೆ ವೇದ ಮತ್ತು ಭಗವದ್ಗೀತೆಯ ಪ್ರಚಾರ ಮತ್ತು ಪ್ರಸಾರಕ್ಕಾಗಿ ಪದ್ಮಶ್ರೀ ಪ್ರಶಸ್ತಿಯೊಂದಿಗೆ ಗೌರವಿಸಲಾಯಿತು. ಈ ಕುರಿತು ಜೊನಾಸ್ ಮಾಸೆಟ್ಟಿ ಮಾತನಾಡಿ, “ನನಗೆ ಇದು ಅನಿರೀಕ್ಷಿತವಾಗಿದೆ. ಇದು ದೊಡ್ಡ ಗೌರವವಾಗಿದೆ. ಬ್ರೆಜಿಲ್ನಲ್ಲಿ ಅನೇಕ ಜನರು ವೇದಗಳನ್ನು ಕಲಿಯುತ್ತಿದ್ದಾರೆ. ಇದು ಕೇವಲ ನನಗೊಬ್ಬನಿಗೆ ಸಂದ ಗೌರವವಲ್ಲ, ಬದಲಿಗೆ ಈ ಪರಂಪರೆಗಾಗಿ ಶ್ರಮಿಸುತ್ತಿರುವ ನಮ್ಮ ಕುಟುಂಬಕ್ಕೂ ಸಂದ ಗೌರವವಾಗಿದೆ” ಎಂದು ಹೇಳಿದರು.
ವೇದಗಳ ಅಧ್ಯಯನದ ನಂತರ, ಮಾಸೆಟ್ಟಿ ಅವರು ಬ್ರೆಜಿಲ್ ನ ರಿಯೊ ಡಿ ಜನೈರೊದಲ್ಲಿ ವಿಶ್ವ ವಿದ್ಯಾ ಸಂಸ್ಥೆಯನ್ನು ಸ್ಥಾಪಿಸಿದರು. ಈ ಸಂಸ್ಥೆಯಲ್ಲಿ ಅವರು ವೇದ, ಸಂಸ್ಕೃತ, ಭಗವದ್ಗೀತೆ ಮತ್ತು ಧ್ಯಾನದ ಕೋರ್ಸ್ಗಳನ್ನು ಪ್ರಾರಂಭಿಸಿದರು. ಮಾಸೆಟ್ಟಿ ಅವರು ಯೋಗ ಮತ್ತು ವೇದಗಳ ಕುರಿತು ಪೋರ್ಚುಗೀಸ್ ಮತ್ತು ಆಂಗ್ಲ ಭಾಷೆಗಳಲ್ಲಿ ಅನೇಕ ಪುಸ್ತಕಗಳನ್ನು ಪ್ರಕಟಿಸಿದ್ದಾರೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ