ಜೂನ್ 5 ರಂದು ಮಂದಿರದ ಮೊದಲ ಮಹಡಿಯಲ್ಲಿ ರಾಮ ದರ್ಬಾರ್ ಸ್ಥಾಪನೆ

ಅಯೋಧ್ಯೆ (ಉತ್ತರ ಪ್ರದೇಶ) – ಇಲ್ಲಿನ ಭವ್ಯ ಶ್ರೀರಾಮ ಮಂದಿರದ ಶಿಖರದ ಮೇಲೆ ಚಿನ್ನದ ಲೇಪಿತ ಕಳಸವನ್ನು ಪ್ರತಿಷ್ಠಾಪಿಸಲಾಗಿದೆ. ಜೂನ್ 5 ರಂದು ಮಂದಿರದ ಮೊದಲ ಮಹಡಿಯಲ್ಲಿ ರಾಮ ದರ್ಬಾರ್ ಸ್ಥಾಪನೆಯಾಗಲಿದೆ. ಇದರಲ್ಲಿ ಭಗವಾನ ಶ್ರೀರಾಮ ಮತ್ತು ಸೀತಾ ಸಿಂಹಾಸನದ ಮೇಲೆ ವಿರಾಜಮಾನರಾಗಲಿದ್ದು, ಭರತ ಮತ್ತು ಹನುಮಾನ ಭಗವಾನ್ ಶ್ರೀರಾಮನ ಪಾದಗಳ ಬಳಿ ಕುಳಿತುಕೊಂಡಿದ್ದಾರೆ. ಇದಕ್ಕಾಗಿ ವಿಧಿವಿಧಾನಗಳು ಜೂನ್ 3 ರಿಂದ ಪ್ರಾರಂಭವಾಗಲಿವೆ. ರಾಮ ದರ್ಬಾರನೊಂದಿಗೆ 7 ಮಂದಿರಗಳ ಪ್ರಾಣಪ್ರತಿಷ್ಠಾಪನೆ ನಡೆಯಲಿದೆ. ‘ಗಂಗಾ ದಶಹರಾ’ ದಿನದಂದು ಅಭಿಜಿತ್ ಮುಹೂರ್ತದಲ್ಲಿ ಬೆಳಿಗ್ಗೆ 11 ಗಂಟೆಗೆ ಪೂಜೆ ಪ್ರಾರಂಭವಾಗಲಿದೆ. ಅಯೋಧ್ಯೆ ಮತ್ತು ಕಾಶಿಯ 101 ಆಚಾರ್ಯರು ಪ್ರಾಣಪ್ರತಿಷ್ಠಾಪನೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಮಯದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಉಪಸ್ಥಿತರಿರಲಿದ್ದಾರೆ.
ಮಂದಿರದ ಆವರಣದಲ್ಲಿರುವ 6 ಮಂದಿರಗಳಲ್ಲಿ ಭಗವಾನ ಸೂರ್ಯ, ಶ್ರೀ ಗಣೇಶ, ಶ್ರೀ ಹನುಮಾನ, ಭಗವಾನ ಶಿವ, ಮಾತಾ ಭಗವತಿ ಮತ್ತು ಮಾತಾ ಅನ್ನಪೂರ್ಣೆಯ ವಿಗ್ರಹಗಳನ್ನು ಸ್ಥಾಪಿಸಲಾಗಿದೆ. ಈ ಮಂದಿರಗಳಲ್ಲಿ ಜೂನ್ 5 ರಂದು ಪ್ರಾಣಪ್ರತಿಷ್ಠಾಪನೆ ನಡೆಯಲಿದೆ. ಇದರ ಜೊತೆಗೆ, ಸಪ್ತ ಮಂಡಪದಲ್ಲಿ 7 ಮಂದಿರಗಳನ್ನು ನಿರ್ಮಿಸಲಾಗಿದೆ. ಇದರಲ್ಲಿ ಮಹರ್ಷಿ ವಾಲ್ಮೀಕಿ, ಮಹರ್ಷಿ ವಿಶ್ವಾಮಿತ್ರ, ಮಹರ್ಷಿ ಅಗಸ್ತ್ಯ, ಮಹರ್ಷಿ ವಸಿಷ್ಠ, ನಿಷಾದರಾಜ, ಅಹಲ್ಯಾ ಮತ್ತು ಶಬರಿ ಅವರ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗಿದೆ.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ