
ಅಯೋಧ್ಯೆ (ಉತ್ತರಪ್ರದೇಶ) – ಇಲ್ಲಿನ ಭವ್ಯ ಶ್ರೀರಾಮ ಮಂದಿರದ ಮೊದಲ ಮಹಡಿಯಲ್ಲಿ ಜೂನ್ 5 ರಂದು ಬೆಳಗ್ಗೆ 11.25 ರಿಂದ 11.40 ರ ಶುಭ ಮುಹೂರ್ತದಲ್ಲಿ ರಾಮ ದರ್ಬಾರ್ ಪ್ರತಿಷ್ಠಾಪಿಸಲಾಯಿತು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಮ ದರ್ಬಾರ್ ಪೂಜೆ ನೆರವೇರಿಸಿದರು. ಈ ದರ್ಬಾರದಲ್ಲಿ ಭಗವಾನ್ ಶ್ರೀರಾಮ, ಮಾತಾ ಸೀತೆ, ಲಕ್ಷ್ಮಣ, ಭರತ, ಶತ್ರುಘ್ನ ಹಾಗೂ ಹನುಮಾನ್ ಜೀ ಅವರ ವಿಗ್ರಹಗಳಿವೆ. ಈ ಸಂದರ್ಭದಲ್ಲಿ ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಖಜಾಂಚಿ ಪ.ಪೂ. ಗೋವಿಂದದೇವ ಗಿರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕಾಗಿ 350 ಜನರನ್ನು ಆಹ್ವಾನಿಸಲಾಗಿತ್ತು. ಅವರಲ್ಲಿ ಹೆಚ್ಚಿನವರು ಟ್ರಸ್ಟ್ನ ಅಧಿಕಾರಿಗಳು ಮತ್ತು ಸಂತರಾಗಿದ್ದರು. ರಾಮ ದರ್ಬಾರ್ನ ವಿಗ್ರಹಗಳನ್ನು ಜೈಪುರದಲ್ಲಿ ತಯಾರಿಸಲಾಗಿದೆ. ಈ ವಿಗ್ರಹಗಳನ್ನು ಮಕರಾನದ ಬಿಳಿ ಅಮೃತಶಿಲೆಯಿಂದ ಕೆತ್ತಲಾಗಿದೆ. ಭಗವಾನ್ ಶ್ರೀರಾಮ ಮತ್ತು ಸೀತೆ ಸಿಂಹಾಸನದಲ್ಲಿ ವಿರಾಜಮಾನರಾಗಿದ್ದಾರೆ. ಭರತ ಮತ್ತು ಹನುಮಾನ್ ಭಗವಾನ್ ಶ್ರೀರಾಮನ ಪಾದದ ಬಳಿ ಕುಳಿತಿದ್ದಾರೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ