Ram Darbhar Installed : ಅಯೋಧ್ಯೆಯ ಶ್ರೀರಾಮ ಮಂದಿರದ ಮೊದಲ ಮಹಡಿಯಲ್ಲಿ ರಾಮ ದರ್ಬಾರ್ ಪ್ರತಿಷ್ಠಾಪನೆ

ಅಯೋಧ್ಯೆ (ಉತ್ತರಪ್ರದೇಶ) – ಇಲ್ಲಿನ ಭವ್ಯ ಶ್ರೀರಾಮ ಮಂದಿರದ ಮೊದಲ ಮಹಡಿಯಲ್ಲಿ ಜೂನ್ 5 ರಂದು ಬೆಳಗ್ಗೆ 11.25 ರಿಂದ 11.40 ರ ಶುಭ ಮುಹೂರ್ತದಲ್ಲಿ ರಾಮ ದರ್ಬಾರ್ ಪ್ರತಿಷ್ಠಾಪಿಸಲಾಯಿತು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಮ ದರ್ಬಾರ್ ಪೂಜೆ ನೆರವೇರಿಸಿದರು. ಈ ದರ್ಬಾರದಲ್ಲಿ ಭಗವಾನ್ ಶ್ರೀರಾಮ, ಮಾತಾ ಸೀತೆ, ಲಕ್ಷ್ಮಣ, ಭರತ, ಶತ್ರುಘ್ನ ಹಾಗೂ ಹನುಮಾನ್ ಜೀ ಅವರ ವಿಗ್ರಹಗಳಿವೆ. ಈ ಸಂದರ್ಭದಲ್ಲಿ ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಖಜಾಂಚಿ ಪ.ಪೂ. ಗೋವಿಂದದೇವ ಗಿರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕಾಗಿ 350 ಜನರನ್ನು ಆಹ್ವಾನಿಸಲಾಗಿತ್ತು. ಅವರಲ್ಲಿ ಹೆಚ್ಚಿನವರು ಟ್ರಸ್ಟ್‌ನ ಅಧಿಕಾರಿಗಳು ಮತ್ತು ಸಂತರಾಗಿದ್ದರು. ರಾಮ ದರ್ಬಾರ್‌ನ ವಿಗ್ರಹಗಳನ್ನು ಜೈಪುರದಲ್ಲಿ ತಯಾರಿಸಲಾಗಿದೆ. ಈ ವಿಗ್ರಹಗಳನ್ನು ಮಕರಾನದ ಬಿಳಿ ಅಮೃತಶಿಲೆಯಿಂದ ಕೆತ್ತಲಾಗಿದೆ. ಭಗವಾನ್ ಶ್ರೀರಾಮ ಮತ್ತು ಸೀತೆ ಸಿಂಹಾಸನದಲ್ಲಿ ವಿರಾಜಮಾನರಾಗಿದ್ದಾರೆ. ಭರತ ಮತ್ತು ಹನುಮಾನ್ ಭಗವಾನ್ ಶ್ರೀರಾಮನ ಪಾದದ ಬಳಿ ಕುಳಿತಿದ್ದಾರೆ.