|

ಮುಂಬಯಿ, ಜೂನ್ 12 – ಸರಕಾರದ ವತಿಯಿಂದ ದೊಡ್ಡ ಪ್ರಮಾಣದಲ್ಲಿ ಸೌಲಭ್ಯಗಳನ್ನು ಪಡೆದು, ಅದರ ಲಾಭವನ್ನು ಬಡ ಮತ್ತು ನಿರ್ಗತಿಕ ರೋಗಿಗಳಿಗೆ ನೀಡಲು ನಿರಾಕರಿಸುವ ರಾಜ್ಯದ ಉದ್ಧಟ ಆಸ್ಪತ್ರೆಗಳನ್ನು ಸರಿದಾರಿಗೆ ತರಲು ಆಸ್ಪತ್ರೆಗಳ ನಿರ್ಗತಿಕ ನಿಧಿಗಳ ಪರಿಶೀಲನೆ ನಡೆಸಲು ಸರಕಾರ ನಿರ್ಧರಿಸಿದೆ. ಇದರೊಂದಿಗೆ, ಬಡನಿರ್ಗತಿಕರಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳ ಮುಂಭಾಗದಲ್ಲಿ ರಿಯಾಯಿತಿಗಳ ಮಾಹಿತಿ ಫಲಕಗಳನ್ನು ರಾಜ್ಯ ಸರಕಾರವೇ ಅಳವಡಿಸಲಿದೆ.
ಧಮ್ದಾಯ ಆಸ್ಪತ್ರೆಗಳ ಮೂಲಕ ರಿಯಾಯಿತಿ ದರದಲ್ಲಿ ಬಡ ಮತ್ತು ನಿರ್ಗತಿಕರಿಗೆ ಚಿಕಿತ್ಸೆ ದೊರೆಯಬೇಕು ಎಂಬುದು ಸರಕಾರದ ಯೋಜನೆಯಾಗಿದೆ; ಆದರೆ, ರಾಜ್ಯದ ಹಲವು ಧರ್ಮದಾಯ ಆಸ್ಪತ್ರೆಗಳು ಸರಕಾರದ ಕಡೆಯಿಂದ ಸೌಲಭ್ಯಗಳನ್ನು ಪಡೆದು, ವಾಸ್ತವವಾಗಿ ರೋಗಿಗಳಿಗೆ ರಿಯಾಯಿತಿಗಳನ್ನು ನೀಡುವುದಿಲ್ಲ. ಈ ಬಗ್ಗೆ ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳು ವಿಧಾನಸಭೆಯಲ್ಲಿ ಹಲವು ಬಾರಿ ಧ್ವನಿ ಎತ್ತಿದ್ದರೂ, ಈ ಆಸ್ಪತ್ರೆಗಳು ಕಾನೂನಿಗೂ ಬಗ್ಗುವುದಿಲ್ಲ. ಆದ್ದರಿಂದ, ಮಹಾರಾಷ್ಟ್ರ ರಾಜ್ಯದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಆದೇಶದ ಮೇರೆಗೆ, ಧರ್ಮದಾಯ ಆಸ್ಪತ್ರೆಗಳಲ್ಲಿನ ಯೋಜನೆಗಳ ಶೇಕಡಾ ನೂರರಷ್ಟು ಲಾಭ ದೊರೆಯುವಂತೆ ಮಾಡಲು ಈ ವಿಶೇಷ ಪ್ರಯತ್ನಗಳನ್ನು ಮಾಡಲಾಗುತ್ತಿದೆ.
ಸಂಪಾದಕೀಯ ನಿಲುವುಸರಕಾರದಿಂದ ಭೂಮಿ, ನಿಧಿ ಮತ್ತು ಅನೇಕ ಸೌಲಭ್ಯಗಳನ್ನು ಪಡೆದು ಉದ್ಧಟತನ ತೋರಿಸುವ ಆಸ್ಪತ್ರೆಗಳಿಗೆ ಬೀಗ ಜಡಿಯಲು ಸರಕಾರ ಹಿಂದೇಟು ಹಾಕಬಾರದು, ಹೀಗಾದರೆ ಮಾತ್ರ ಇಂತಹ ಉದ್ಧಟ ಆಸ್ಪತ್ರೆಗಳು ಸರಿದಾರಿಗೆ ಬರುತ್ತವೆ! |
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಮನುಷ್ಯ, ಮನಸ್ಸು ಹಾಗೂ ಆಹಾರ