|

ಭದ್ರಕ್ (ಒಡಿಶಾ) – ಮುಸ್ಲಿಂ ಗೋಕಳ್ಳರು ನಡೆಸಿದ ದಾಳಿಯಲ್ಲಿ ಹಿಂದೂ ಗೋರಕ್ಷಕ ಸಂತೋಷ ಪರಿಡಾ ಎಂಬವರು ಜೂನ್ 11 ರಂದು ನಿಧನರಾದರು. ಕೆಲವು ದಿನಗಳ ಹಿಂದೆ ಗೋಕಳ್ಳರ ಗುಂಪೊಂದು ಪರಿಡಾ ಅವರ ಮೇಲೆ ದಾಳಿ ಮಾಡಿತ್ತು. ಈ ದಾಳಿಯಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಮೇ 20 ರಿಂದ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಜೂನ್ 11 ರಂದು ಅವರು ಸಾವನ್ನಪ್ಪಿದರು. ಪರಿಡಾ ಅವರು ಭದ್ರಕ್ ನ ತಿಹಿದಿ ಗ್ರಾಮದ ನಿವಾಸಿಯಾಗಿದ್ದರು.
Hindu gau rakshak dies after attack by Mu$l!m cow smugglers in Bhadrak (Odisha)
🔸Attack took place 12 days ago
🔸Hindus enraged; internet services suspended
🔸BJP Government announces ₹10 lakh compensation📌Preventing cow smuggling is the duty of the Government, yet it is… pic.twitter.com/zGBKZdA45R
— Sanatan Prabhat (@SanatanPrabhat) June 13, 2025
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 12 ಜನರನ್ನು ಬಂಧಿಸಿದ್ದು, ಪರಿಸ್ಥಿತಿ ಕೈಮೀರಿ ಹೋಗದಂತೆ ತಡೆಯಲು ಜೂನ್ 12, 2025 ರಿಂದ ಭದ್ರಕ್ ಜಿಲ್ಲೆಯಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಭದ್ರಕ್ ದಲ್ಲಿ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಈ ಘಟನೆಯನ್ನು ಗಮನಿಸಿದ್ದು, ಸಂತ್ರಸ್ತ ಕುಟುಂಬಕ್ಕೆ ₹10 ಲಕ್ಷ ಪರಿಹಾರ ಘೋಷಿಸಿದ್ದಾರೆ. ಈ ಪ್ರಕರಣದ ಬಳಿಕ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಲ್ಲಿನ ಸರಕಾರ ಭರವಸೆ ನೀಡಿದೆ.
ಸಂಪಾದಕೀಯ ನಿಲುವುಗೋವುಗಳ ಕಳ್ಳಸಾಗಣೆಯನ್ನು ತಡೆಯುವುದು ಸರಕಾರದ ಕೆಲಸವಾಗಿರುವಾಗ, ಹಿಂದೂ ಕಾರ್ಯಕರ್ತರು ಅದನ್ನು ಮಾಡುತ್ತಿದ್ದಾರೆ ಮತ್ತು ಹಲವು ಬಾರಿ ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಾರೆ. ಆದರೂ, ಪೊಲೀಸರು ಮತ್ತು ಸರಕಾರಕ್ಕೆ ಇದರ ಬಗ್ಗೆ ಯಾವುದೇ ಕಾಳಜಿ ಇರುವುದಿಲ್ಲ. ಹಾಗಾಗಿ, ಗೋವುಗಳ ಕಳ್ಳಸಾಗಣೆಯಾದರೆ, ಆ ಪ್ರದೇಶದ ಸಂಬಂಧಪಟ್ಟ ಪೊಲೀಸ್ ಅಧಿಕಾರಿಯನ್ನು ವಜಾಗೊಳಿಸಿ ಜೈಲಿಗೆ ಹಾಕುವ ಕಾನೂನನ್ನು ಜಾರಿಗೆ ತರಬೇಕಾದ ಅವಶ್ಯಕತೆಯಿದೆ! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ