ಪಾಕಿಸ್ತಾನಕ್ಕಾಗಿ ಗೂಢಚಾರಿಕೆ ಮಾಡಿದ ಆರೋಪ ಮಾಡಿ ವೃದ್ಧೆಯೊಬ್ಬರಿಂದ 22 ಲಕ್ಷ ರೂಪಾಯಿ ವಂಚನೆ!

ಮುಂಬಯಿ – ಇಲ್ಲಿ 64 ವರ್ಷದ ವೃದ್ಧೆಯೊಬ್ಬರಿಂದ ಪಾಕಿಸ್ತಾನಕ್ಕಾಗಿ ಗೂಢಚಾರಿಕೆ ಮಾಡಿದ್ದಾರೆ ಎಂಬ ಆರೋಪದ ಮೇಲೆ 22 ಲಕ್ಷ 40 ಸಾವಿರ ರೂಪಾಯಿ ವಂಚನೆ ಮಾಡಲಾಗಿದೆ. ಈ ಮಹಿಳೆ ಗಿರ್ಗಾವ್ನಲ್ಲಿ ವಾಸಿಸುತ್ತಿದ್ದು, ವಂಚನೆಯಾಗಿರುವುದು ಅರಿವಿಗೆ ಬಂದ ತಕ್ಷಣ ಪೊಲೀಸರಿಗೆ ದೂರು ನೀಡಿದ್ದಾರೆ.
ಅಪರಿಚಿತ ಸಂಖ್ಯೆಗಳಿಂದ ಕರೆ ಬಂದಾಗ, ಮಾತನಾಡಿದ ವ್ಯಕ್ತಿ ತಾನು ದೆಹಲಿ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿ ಪ್ರೇಮ್ ಕುಮಾರ್ ಗುಪ್ತಾ ಎಂದು ಹೇಳಿಕೊಂಡಿದ್ದಾನೆ. ಜಮ್ಮು-ಕಾಶ್ಮೀರ ಗಡಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದಾಗಿ ಹೇಳಿಕೊಂಡಿದ್ದಾನೆ. “ನಿಮ್ಮ ವಿರುದ್ಧ ಪಾಕಿಸ್ತಾನಕ್ಕಾಗಿ ಗೂಢಚಾರಿಕೆ ನಡೆಸಿದ ಮತ್ತು ಪಾಕಿಸ್ತಾನಕ್ಕೆ ಸೂಕ್ಷ್ಮ ಮಾಹಿತಿಯನ್ನು ಒದಗಿಸಿದ ಬಗ್ಗೆ ದೂರು ದಾಖಲಾಗಿದೆ” ಎಂದು ಆತ ಹೇಳಿಕೊಂಡಿದ್ದಾನೆ. “ಗೂಢಚಾರಿಕೆ ಅಪರಾಧಕ್ಕಾಗಿ ನಿಮಗೆ 10 ವರ್ಷಗಳ ಜೈಲು ಶಿಕ್ಷೆ ಮತ್ತು 50 ಲಕ್ಷ ರೂಪಾಯಿಗಳವರೆಗೆ ಆರ್ಥಿಕ ದಂಡ ವಿಧಿಸಬಹುದು” ಎಂದು ತಿಳಿಸಿದ್ದಾನೆ. ಕ್ರಮದ ಭಯದಿಂದ ಮಹಿಳೆ ಸಂಬಂಧಪಟ್ಟವರಿಗೆ 22 ಲಕ್ಷ 40 ಸಾವಿರ ರೂಪಾಯಿಗಳನ್ನು ನೀಡಿದ್ದಾರೆ. ಹಣವನ್ನು ಖಾತೆಗೆ ಜಮಾ ಮಾಡಿದ ನಂತರ, ದೂರುದಾರ ಮಹಿಳೆಯನ್ನು ಯಾರೂ ಸಂಪರ್ಕಿಸಲಿಲ್ಲ. ಆಗ ತಮಗೆ ವಂಚನೆಯಾಗಿದೆ ಎಂದು ಆಕೆಗೆ ಅರಿವಾಯಿತು.
ಸಂಪಾದಕೀಯ ನಿಲುವು
|
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !