ಸಂವಿಧಾನದಿಂದ ‘ಜಾತ್ಯತೀತ’ ಮತ್ತು ‘ಸಮಾಜವಾದಿ’ ಪದಗಳನ್ನು ತೆಗೆದುಹಾಕಿ! – ಆರ್‌ಎಸ್‌ಎಸ್ ಬೇಡಿಕೆ

ನವದೆಹಲಿ – ತುರ್ತು ಪರಿಸ್ಥಿತಿ ಜಾರಿಯಾಗಿ 2025ರ ಜೂನ್ 25ಕ್ಕೆ 50 ವರ್ಷ ಪೂರೈಸಿದೆ. ಈ ಸಂದರ್ಭದ ಬಗ್ಗೆ ಮಾತನಾಡಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು, ಸಂವಿಧಾನದ ಪ್ರಸ್ತಾವನೆಯಿಂದ ‘ಸಮಾಜವಾದಿ’ ಮತ್ತು ‘ಜಾತ್ಯತೀತ’ ಪದಗಳನ್ನು ತೆಗೆದುಹಾಕುವಂತೆ ಒತ್ತಾಯಿಸಿದರು. ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಬರೆದ ಸಂವಿಧಾನದಲ್ಲಿ ಈ ಪದಗಳಿರಲಿಲ್ಲ ಎಂದು ಅವರು ಹೇಳಿದರು.

ಹೊಸಬಾಳೆ ಅವರು ಮಾತು ಮುಂದುವರೆಸಿ,

1. ಜೂನ್25.1975 ರಿಂದ ಮಾರ್ಚ್ 21. 1977 ವರೆಗೆ 21 ತಿಂಗಳ ಕಾಲ ದೇಶದಲ್ಲಿ ತುರ್ತು ಪರಿಸ್ಥಿತಿ ಇತ್ತು. ಇದಕ್ಕಾಗಿ ಕಾಂಗ್ರೆಸ್ ದೇಶದ ಕ್ಷಮೆ ಯಾಚಿಸಬೇಕು.

2.ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿ ಘೋಷಿಸಿದ ನಂತರ, ಸರಕಾರವು ಸಾವಿರಾರು ನಾಗರಿಕರನ್ನು ಬಂಧಿಸಿ ಹಿಂಸೆ ನೀಡಿತು. ನ್ಯಾಯಾಂಗ ಮತ್ತು ಮಾಧ್ಯಮಗಳ ಸ್ವಾತಂತ್ರ್ಯವನ್ನು ನಿರ್ಬಂಧಿಸಲಾಯಿತು. ಇಂದು ಇದೇ ಜನರು (ಕಾಂಗ್ರೆಸ್) ದೇಶಾದ್ಯಂತ ಸಂವಿಧಾನದ ಪ್ರತಿಗಳನ್ನು ಹಿಡಿದುಕೊಂಡು ಓಡಾಡುತ್ತಿದ್ದಾರೆ.

ಸಂಪಾದಕೀಯ ನಿಲುವು

ತುರ್ತು ಪರಿಸ್ಥಿತಿಯ ಸಮಯದಲ್ಲಿ ಸಾಂವಿಧಾನಿಕ ಸರಕಾರ ಅಸ್ತಿತ್ವದಲ್ಲಿಲ್ಲದಿದ್ದಾಗ ಈ ಪದಗಳನ್ನು ಸಂವಿಧಾನದ ಪೀಠಿಕೆಗೆ ಸೇರಿಸಲಾಯಿತು. ಆದ್ದರಿಂದ ಈಗ ಕೇಂದ್ರ ಸರಕಾರವು ಈ ಪದಗಳನ್ನು ಅಸಂವಿಧಾನಿಕ ಎಂದು ಘೋಷಿಸಿ, ಅವುಗಳನ್ನು ತೆಗೆದುಹಾಕುವ ಮೂಲಕ ದೇಶಕ್ಕೆ ನ್ಯಾಯ ಒದಗಿಸಬೇಕು!