|

ಪುಣೆ – ಮಹಾರಾಷ್ಟ್ರ ರಾಜ್ಯ ಮಾಹಿತಿ ಹಕ್ಕು ಕಾರ್ಯಕರ್ತರ ಮಹಾಸಂಘದ ಪ್ರಧಾನ ಕಾರ್ಯದರ್ಶಿ ಪ್ರದೀಪ ನಾಯಕ ಅವರು ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ಪಿಂಪರಿ-ಚಿಂಚವಡ ಪೊಲೀಸರಿಂದ ಬಾಂಗ್ಲಾದೇಶಿ ನುಸುಳುಕೋರರ ಬಗ್ಗೆ ಮಾಹಿತಿ ಕೇಳಿದ್ದರು. ಈ ಮಾಹಿತಿಯ ಪ್ರಕಾರ, ಪೊಲೀಸ ಆಯುಕ್ತರ ಕಚೇರಿಯ ಸ್ಥಾಪನೆಯಾದಾಗಿನಿಂದ ಇಲ್ಲಿಯವರೆಗೆ 48 ಬಾಂಗ್ಲಾದೇಶಿ ನಾಗರಿಕರನ್ನು ದೇಶಕ್ಕೆ ಒಳನುಸುಳಿದ ಪ್ರಕರಣಗಳಲ್ಲಿ ಬಂಧಿಸಲಾಗಿದೆ; ಆದರೆ ಅವರಲ್ಲಿ ಒಬ್ಬರನ್ನೂ ಸಹ ಇಲ್ಲಿಯವರೆಗೆ ಬಾಂಗ್ಲಾದೇಶಕ್ಕೆ ಹಿಂದಿರುಗಿಸಲಾಗಿಲ್ಲ ಎಂದು ಪೊಲೀಸರಿಂದ ಉತ್ತರ ಲಭಿಸಿದೆ. ಇದಕ್ಕೆ ಪ್ರತಿಕ್ರಿಯಿಸಿದ ನಾಯಕ ಅವರು, ‘ಈ ನುಸುಳುಕೋರರು ಇನ್ನೂ ಭಾರತದಲ್ಲೇ ಹೇಗೆ ಇದ್ದಾರೆ?’ ಎಂದು ನೇರವಾಗಿ ಪ್ರಶ್ನಿಸಿದ್ದಾರೆ.
ನುಸುಳುಕೋರರ ಪ್ರಕರಣವನ್ನು ‘ರಾಷ್ಟ್ರೀಯ ಭದ್ರತೆ’ ಎಂದು ಪರಿಗಣಿಸಬೇಕು!
ಈ ಉತ್ತರದ ಹಿನ್ನೆಲೆಯಲ್ಲಿ ಪ್ರದೀಪ ನಾಯಕ ಅವರು, ಬಾಂಗ್ಲಾದೇಶಿ ನುಸುಳುಕೋರರು ಕೇವಲ ಅಕ್ರಮವಷ್ಟೇ ಅಲ್ಲದೆ, ರಾಷ್ಟ್ರೀಯ ಭದ್ರತೆಗೂ ದೊಡ್ಡ ಅಪಾಯಕಾರಿಯಾಗಿದೆ. ಆದರೂ, ಅವರ ವಿರುದ್ಧ ಯಾವುದೇ ನಿರ್ದಿಷ್ಟ ಕ್ರಮ ಕೈಗೊಳ್ಳದಿರುವುದು ಆಡಳಿತದ ಗಂಭೀರ ನಿರ್ಲಕ್ಷ್ಯವನ್ನು ತೋರಿಸುತ್ತದೆ. ಈ ನುಸುಳುಕೋರರ ವಿರುದ್ಧ ತಕ್ಷಣವೇ ತ್ವರಿತಗತಿ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಸಿ, ಅವರನ್ನು ಅವರ ದೇಶಕ್ಕೆ ಮರಳಿ ಕಳುಹಿಸಬೇಕು. ಇಂತಹ ಪ್ರಕರಣಗಳಲ್ಲಿ ವಿಳಂಬವಿಲ್ಲದೆ ತಕ್ಷಣದ ಕ್ರಮ ಕೈಗೊಳ್ಳಲು ಕೇಂದ್ರ ಸರಕಾರ ಮತ್ತು ಸರ್ವೋಚ್ಚ ನ್ಯಾಯಾಲಯವು ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ. ಈ ನುಸುಳುಕೋರರ ಪ್ರಕರಣವನ್ನು ‘ರಾಷ್ಟ್ರೀಯ ಭದ್ರತೆ’ ಎಂದು ಪರಿಗಣಿಸಬೇಕು ಎಂದು ಅವರು ಅಪೇಕ್ಷೆಯನ್ನು ವ್ಯಕ್ತಪಡಿಸಿದ್ದಾರೆ.
ಸಂಪಾದಕೀಯ ನಿಲುವು
|
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ