ಬಜರಂಗದಳದ ದೂರಿನ ನಂತರ ಪೊಲೀಸರಿಂದ ತನಿಖೆ

ಅಂಬಾಲಾ (ಹರಿಯಾಣ) – ಅಂಬಾಲಾ ಕಂಟೋನ್ಮೆಂಟ್ನ ಹಿಮಂತಪುರಾ ಪ್ರದೇಶದಲ್ಲಿರುವ ಚರ್ಚ್ವೊಂದರಲ್ಲಿ ಬೇಸಿಗೆ ಶಿಬಿರದ ಹೆಸರಿನಲ್ಲಿ ಹಿಂದೂ ಮಕ್ಕಳನ್ನು ಮತಾಂತರ ಮಾಡಲಾಗುತ್ತಿದೆ ಎಂದು ಬಜರಂಗದಳ ಆರೋಪಿಸಿದೆ. ಬಜರಂಗದಳದ ಕಾರ್ಯಕರ್ತರು ಚರ್ಚ್ಗೆ ಹೋಗಿ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ನಂತರ, ಪೊಲೀಸರು ಸ್ಥಳಕ್ಕೆ ಬಂದು ಮಕ್ಕಳನ್ನು ವಿಚಾರಿಸಿದಾಗ, ತಾವು ಶಿಬಿರಕ್ಕಾಗಿ ಬಂದಿದ್ದೆವು; ಆದರೆ ಅವರಿಗೆ ಯೇಸುಕ್ರಿಸ್ತನ ಬಗ್ಗೆ ಮಾಹಿತಿ ನೀಡಲಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.
ಮತ್ತೊಂದೆಡೆ, ಚರ್ಚ್ನ ಪಾದ್ರಿ ಆರೋಪಗಳನ್ನು ತಳ್ಳಿಹಾಕಿದ್ದಾರೆ. ನಾವು ಪ್ರತಿ ವರ್ಷ ಇಂತಹ ಶಿಬಿರಗಳನ್ನು ಆಯೋಜಿಸುತ್ತೇವೆ ಎಂದು ಪಾದ್ರಿ ಹೇಳಿದರು. ಬಜರಂಗದಳದವರು ಬಲವಂತವಾಗಿ ಚರ್ಚ್ಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ಮತಾಂತರದ ಆರೋಪಗಳು ಸುಳ್ಳು ಎಂದು ಅವರು ತಿಳಿಸಿದ್ದಾರೆ.
ಪೊಲೀಸರು ಮೂರು ಗಂಟೆಗಳ ಕಾಲ ಎರಡೂ ಗುಂಪುಗಳನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಚರ್ಚ್ನಲ್ಲಿ ಮಾತ್ರವಲ್ಲದೆ, ಪೊಲೀಸ್ ಠಾಣೆಯಲ್ಲಿಯೂ ಎರಡೂ ಕಡೆಯವರ ನಡುವೆ ವಾಗ್ವಾದ ನಡೆದಿದೆ. ಸದ್ಯ ಎರಡೂ ಗುಂಪುಗಳ ದೂರುಗಳ ಆಧಾರದ ಮೇಲೆ ತನಿಖೆ ನಡೆಯುತ್ತಿದೆ.
New Missionary Conversion Tactic:
A so-called summer camp was organised in a Church for students in Ambala, Haryana. In the name of the camp the children were given religious teachings. The following video contains an altercation between Bajrang Dal activists and the… pic.twitter.com/iZuzau5Dus
— Subhi Vishwakarma (@subhi_karma) June 28, 2025
ಸಂಪಾದಕೀಯ ನಿಲುವುದೇಶದಲ್ಲಿ ಮತಾಂತರ-ವಿರೋಧಿ ಕಾನೂನು ಇಲ್ಲದಿರುವುದರಿಂದ ಕ್ರೈಸ್ತ ಮಿಷನರಿಗಳಿಗೆ ಅನುಕೂಲಕರವಾಗಿದೆ, ಇದು ಹಿಂದೂಗಳಿಗೆ ನಾಚಿಕೆಗೇಡು! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !