ಕೊಲಕಾತಾ: ಕಾನೂನು ಕಾಲೇಜಿನ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ

ಕೋಲಕಾತಾ (ಪ.ಬಂಗಾಳ) – ಕಾನೂನು ಕಾಲೇಜಿನಲ್ಲಿ 19 ವರ್ಷದ ವಿದ್ಯಾರ್ಥಿನಿ ಮೇಲೆ ಅದೇ ಕಾಲೇಜಿನ ಇಬ್ಬರು ಹಾಲಿ ವಿದ್ಯಾರ್ಥಿಗಳು ಮತ್ತು ಒಬ್ಬ ಮಾಜಿ ವಿದ್ಯಾರ್ಥಿ ಸೇರಿ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ರಾಜ್ಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರು, ‘ವಿದ್ಯಾರ್ಥಿನಿ ತಾನು ಎಲ್ಲಿಗೆ ಹೋಗುತ್ತಿದ್ದಾಳೆ ಎಂದು ಯಾರಿಗಾದರೂ ಹೇಳಿದ್ದರೆ, ಮತ್ತು ತನ್ನೊಂದಿಗೆ ಕೆಲವು ಸ್ನೇಹಿತರನ್ನು ಕರೆದುಕೊಂಡು ಹೋಗಿದ್ದರೆ, ಈ ಘಟನೆ ನಡೆಯುತ್ತಿರಲಿಲ್ಲ. ಅಪರಾಧಿಗಳು ಪರಿಸ್ಥಿತಿಯ ಲಾಭ ಪಡೆದರು’ ಎಂದು ಆಘಾತಕಾರಿ ಹೇಳಿಕೆ ನೀಡಿದ್ದಾರೆ. ಮಿತ್ರಾ ಅವರ ಹೇಳಿಕೆಗೆ ಬಿಜೆಪಿ ತೀವ್ರ ಟೀಕೆ ವ್ಯಕ್ತಪಡಿಸಿದ ನಂತರ, ಅವರು ಸ್ಪಷ್ಟನೆ ನೀಡಿದ್ದಾರೆ. ಮಿತ್ರಾ ಅವರು, ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ತಮ್ಮ ಮಾತಿಗೆ ಅಂತಹ ಅರ್ಥವಿರಲಿಲ್ಲ ಎಂದಿದ್ದಾರೆ.
🚨 Kolkata Rape Case: Shocking insensitivity from TMC MLA Madan Mitra 😡❗
“Why did the victim student even go there?” – he asked after a gang rape at a law college 💔🎓
🛑 Law & order in Bengal under TMC is collapsing!
🗳️ Time to impose President’s Rule in Bengal?… pic.twitter.com/TBIY2Bphkr
— Sanatan Prabhat (@SanatanPrabhat) June 29, 2025
ಮಿತ್ರಾ ಅವರಿಗಿಂತ ಮೊದಲು ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು, ‘ಒಬ್ಬ ಸ್ನೇಹಿತ ತನ್ನ ಗೆಳತಿಯ ಮೇಲೆ ಅತ್ಯಾಚಾರ ಮಾಡಿದರೆ ಏನು ಮಾಡಬಹುದು? ಶಾಲೆಗಳಲ್ಲಿ ಪೊಲೀಸರು ಇರುತ್ತಾರೆಯೇ? ವಿದ್ಯಾರ್ಥಿಗಳು ಓರ್ವ ವಿದ್ಯಾರ್ಥಿನಯ ಬಲಾತ್ಕಾರ ಮಾಡಿದರೆ ಸಂತ್ರಸ್ತೆಯನ್ನು ಯಾರು ರಕ್ಷಿಸುತ್ತಾರೆ? ಈ ಎಲ್ಲಾ ಅಪರಾಧಗಳು ಮತ್ತು ಕಿರುಕುಳವನ್ನು ನೀಡುವವರು ಯಾರು? ಕೆಲವು ಪುರುಷರು ಹೀಗೆ ಮಾಡುತ್ತಾರೆ. ಮಹಿಳೆಯರು ಯಾರ ವಿರುದ್ಧ ಹೋರಾಡಬೇಕು? ಮಹಿಳೆಯರು ಈ ವಿಕೃತ ಪುರುಷರ ವಿರುದ್ಧ ಹೋರಾಡಬೇಕು’ ಎಂದಿದ್ದರು.
ಮದನ್ ಮಿತ್ರಾ ಮತ್ತು ಕಲ್ಯಾಣ್ ಬ್ಯಾನರ್ಜಿ ಅವರ ಹೇಳಿಕೆಗಳಿಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಕೈ ಜಾಡಿಸಿಕೊಂಡಿದೆ.
ಸಂಪಾದಕೀಯ ನಿಲುವುತೃಣಮೂಲ ಕಾಂಗ್ರೆಸ್ ಸರ್ಕಾರವಿರುವ ಪ.ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಅಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸುವುದು ಅವಶ್ಯಕ ಎಂಬುದು ಈ ಹೇಳಿಕೆಯಿಂದ ತಿಳಿದುಬರುತ್ತದೆ! |
ಮಧ್ಯಪ್ರದೇಶದ ಸಚಿವ ಸಂಪುಟದಿಂದ ಸಮಾನ ನಾಗರಿಕ ಸಂಹಿತೆಗೆ ಅನುಮೋದನೆ
ತ್ರಿಪುರಾ ಡಿಜಿಪಿ ಅನುರಾಗ್ ಧನಖಡ್ ಮೃತದೇಹ ಪತ್ತೆ : Anurag Dhankar Death
ಆಗಿನ ಧಾರ್ಮಿಕ ದತ್ತಿ ಇಲಾಖೆಯ ನಿರೀಕ್ಷಕಿ ರಾಗಿಣಿ ಖಡ್ಕೆ ಸೇರಿದಂತೆ ಗುತ್ತಿಗೆದಾರನ ವಿರುದ್ಧ ದೂರು ದಾಖಲು !
ಗದ್ದಲದ ಕಾರಣದಿಂದ ಸಂಸತ್ತಿನ ಕಲಾಪ ದಿನವಿಡೀ ಮುಂದೂಡಿಕೆ
ಮೂರು ಷರತ್ತುಗಳನ್ನು ಒಪ್ಪಿದರೆ ಉಪವಾಸ ಸತ್ಯಾಗ್ರಹ ಅಂತ್ಯ ! – ಸೋನಮ್ ವಾಂಗ್ಚುಕ್
ಹಿಂಸಾಚಾರಕ್ಕೆ ತಿರುಗಿದ ‘ಕಾಕರೋಚ್ ಜನತಾ ಪಾರ್ಟಿ’ಯ ಸಂಸತ್ ಭವನ ಚಲೋ ಪ್ರತಿಭಟನೆ; ಪೊಲೀಸರಿಂದ ಲಾಠಿ ಪ್ರಹಾರ