Yaduveer Wadiyar Dress Code : ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಿ! – ಸಂಸದ ಯದುವೀರ್ ಒಡೆಯರ್

ಮೈಸೂರು – ಇಲ್ಲಿನ ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸುವ ಬೇಡಿಕೆಗೆ ಸಂಸದ ಯದುವೀರ ಒಡೆಯರ್ ಬೆಂಬಲ ಸೂಚಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಯದುವೀರ ಒಡೆಯರ್, ‘ನಾನು ಯಾವಾಗಲೂ ವಸ್ತ್ರ ಸಂಹಿತೆಯ ಪರವಾಗಿದ್ದೇನೆ. ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವಾಗ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು. ಅದು ನಮ್ಮ ಸಂಸ್ಕೃತಿಯ ಭಾಗವಾಗಿದೆ’ ಎಂದರು. ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಬೇಕು ಎಂದು ಅವರು ಒತ್ತಾಯಿಸಿದರು. ತಿರುಪತಿಯ ಮಾದರಿಯಲ್ಲಿ ಚಾಮುಂಡಿ ಬೆಟ್ಟದಲ್ಲಿಯೂ ಮೊಬೈಲ್ ಫೋನ್‌ಗಳ ಬಳಕೆಯನ್ನು ನಿಷೇಧಿಸಬೇಕು. ಇತ್ತೀಚೆಗೆ ಕೆಲವರು ಅರಿವಿಲ್ಲದೆ ದೇವಿಯ ಮೂಲ ವಿಗ್ರಹದ ವೀಡಿಯೊಗಳನ್ನು ಮಾಡುತ್ತಿದ್ದಾರೆ. ಇದರಿಂದ ಧಾರ್ಮಿಕ ಸ್ಥಳದ ಪಾವಿತ್ರ್ಯತೆಗೆ ಭಂಗ ಬರುತ್ತದೆ. ಈ ಸಂಬಂಧ ಸೂಕ್ತ ಕಾನೂನು ರೂಪಿಸಬೇಕು ಎಂದೂ ಅವರು ಒತ್ತಾಯಿಸಿದರು.

ಸಂಪಾದಕೀಯ ನಿಲುವು

ಜನ್ಮತಃ ಹಿಂದೂಗಳು ಧರ್ಮಾಚರಣೆಯನ್ನು ತ್ಯಜಿಸಿದ್ದರಿಂದಲೇ ಇಂತಹ ಬೇಡಿಕೆಗಳನ್ನು ಮುಂದಿಡಬೇಕಾಗಿದೆ. ಮುಸಲ್ಮಾನರಿಗೆ ಅವರ ಧಾರ್ಮಿಕ ಸ್ಥಳಗಳಲ್ಲಿ ಇಂತಹ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸುವಂತೆ ಬೇಡಿಕೆ ಇಡಬೇಕಾಗುತ್ತಿಲ್ಲ ಎಂಬುದನ್ನು ಹಿಂದೂಗಳು ಗಮನಿಸಬೇಕು!