
ಶಿಮ್ಲಾ – ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ 150 ಮನೆಗಳು ಕುಸಿದಿದ್ದು, 63 ಜನರು ಸಾವನ್ನಪ್ಪಿದ್ದಾರೆ. ಮೇಘ ಸ್ಫೋಟದಿಂದಾಗಿ ಹಿಮಾಚಲ ಪ್ರದೇಶವು ₹400 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿ-ಪಾಸ್ತಿಗಳನ್ನು ಕಳೆದುಕೊಂಡಿದೆ. ಹವಾಮಾನ ಇಲಾಖೆಯು, ಜುಲೈ 7, 2025 ರವರೆಗೆ ಧಾರಾಕಾರ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.
1. ಮಂಡಿ ಜಿಲ್ಲೆಯ ಥುನಾಗ್ ಅತಿ ಹೆಚ್ಚು ಹಾನಿಗೊಳಗಾಗಿದ್ದು, ರಸ್ತೆಗಳು ಬಂದ್ ಆಗಿವೆ. ವಿದ್ಯುತ್ ಮತ್ತು ನೀರಿನ ಪೂರೈಕೆಯೂ ಸಹ ನಿಂತಿದೆ. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಹಾನಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯನ್ನು ವ್ಯಕ್ತಪಡಿಸಿದೆ.
2. ಸಂತ್ರಸ್ತರಿಗಾಗಿ ಸಹಾಯ ಶಿಬಿರಗಳನ್ನು ನಿರ್ಮಿಸಲಾಗಿದ್ದು, ವಾಯುಪಡೆಯು ಸಂತ್ರಸ್ತರಿಗೆ ಆಹಾರದ ಪೊಟ್ಟಣಗಳನ್ನು ವಿತರಿಸುತ್ತಿದೆ.
3. ಪ್ರವಾಹದಲ್ಲಿ 164 ಜಾನುವಾರುಗಳು ಸಹ ಸಾವನ್ನಪ್ಪಿವೆ. ಒಟ್ಟು 402 ಜನರನ್ನು ರಕ್ಷಿಸಲಾಗಿದೆ.
4. ಶಿಮ್ಲಾದಲ್ಲಿಯೂ ಭೂಕುಸಿತ ಸಂಭವಿಸಿದ್ದು ಅದೃಷ್ಟವಶಾತ್, ಅಲ್ಲಿ ಯಾವುದೇ ಜೀವಹಾನಿ ವರದಿಯಾಗಿಲ್ಲ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ