
ಕರ್ಣಾವತಿ (ಗುಜರಾತ) – ಗುಜರಾತನಲ್ಲಿ ವಾಸಿಸುತ್ತಿದ್ದ 250 ಬಾಂಗ್ಲಾದೇಶಿ ಅಕ್ರಮ ವಲಸಿಗರನ್ನು ಜುಲೈ 2 ರಂದು ಗಡೀಪಾರು ಮಾಡಲಾಯಿತು. ಈ ಅಕ್ರಮ ವಲಸಿಗರನ್ನು ಭಾರತೀಯ ವಾಯುಪಡೆಯ ವಿಶೇಷ ವಿಮಾನದ ಮೂಲಕ ವಡೋದರಾ ವಾಯುನೆಲೆಯಿಂದ ಢಾಕಾ (ಬಾಂಗ್ಲಾದೇಶ)ಗೆ ಕಳುಹಿಸಲಾಯಿತು. ಕಟ್ಟುನಿಟ್ಟಿನ ಭದ್ರತೆಯಲ್ಲಿ ಪೊಲೀಸ್ ಮತ್ತು ಗುಪ್ತಚರ ಸಂಸ್ಥೆಗಳು ಈ ಕಾರ್ಯಾಚರಣೆಯನ್ನು ನಡೆಸಿದವು. ಯಾವುದೇ ಗೊಂದಲ ಉಂಟಾಗದಂತೆ, ಎಲ್ಲಾ ಅಕ್ರಮ ವಲಸಿಗರ ಕೈಗಳನ್ನು ಕಟ್ಟಲಾಗಿತ್ತು.

ಈ ಬಾಂಗ್ಲಾದೇಶಿ ಅಕ್ರಮ ವಲಸಿಗರನ್ನು ಕರ್ಣಾವತಿ (ಅಹಮದಾಬಾದ), ಸೂರತ, ವಡೋದರಾ ಮತ್ತು ರಾಜಕೋಟನಂತಹ ವಿವಿಧ ನಗರಗಳಿಂದ ಪೊಲೀಸರ ಮೇಲ್ವಿಚಾರಣೆಯಲ್ಲಿ ಬಸ್ಸುಗಳ ಮೂಲಕ ಕರೆತರಲಾಯಿತು. ಕಳೆದ 2 ತಿಂಗಳಲ್ಲಿ 1 ಸಾವಿರದ 200 ಕ್ಕೂ ಹೆಚ್ಚು ಬಾಂಗ್ಲಾದೇಶಿ ಅಕ್ರಮ ವಲಸಿಗರನ್ನು ವಾಪಸ್ಸು ಕಳುಹಿಸಲಾಗಿದೆ. ನಕಲಿ ಆಧಾರ ಕಾರ್ಡ್, ಪಾನ ಕಾರ್ಡ್ಗಳಂತಹ ದಾಖಲೆಗಳನ್ನು ಪರಿಶೀಲಿಸಿ ಪೊಲೀಸರು ಅವರ ಗುರುತನ್ನು ಪತ್ತೆ ಮಾಡುತ್ತಿದ್ದಾರೆ.
✈️ 250 Bangladeshi infiltrators deported from Gujarat with hands tied!
🛡️ A strong message to illegal entrants.
📍 All had fake IDs, picked from 4 cities.
🔁 Over 1,200 deported in 2 months — crackdown intensifies!
⚠️ Action must continue daily with zero re-entry!… pic.twitter.com/cTMZTKyvjA
— Sanatan Prabhat (@SanatanPrabhat) July 5, 2025
ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು !
ಅಧಿಕಾರಿಗಳ ಪ್ರಕಾರ, ಈ ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು. ವಿಶೇಷವಾಗಿ ದೊಡ್ಡ ನಗರಗಳಲ್ಲಿ ಅಕ್ರಮ ವಲಸಿಗರ ಮೇಲೆ ನಿಗಾ ಇಡಲಾಗುತ್ತಿದೆ. ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುವಂತೆ ನಾಗರಿಕರಿಗೂ ಮನವಿ ಮಾಡಲಾಗಿದೆ.
ಸಂಪಾದಕೀಯ ನಿಲುವುಇಂತಹ ಕ್ರಮಗಳು ದೇಶಾದ್ಯಂತ ಪ್ರತಿದಿನ ನಡೆಯಬೇಕು ಮತ್ತು ಅದೇ ಸಮಯದಲ್ಲಿ, ಈ ಅಕ್ರಮ ವಲಸಿಗರು ಮತ್ತೆ ಭಾರತಕ್ಕೆ ನುಸುಳದಂತೆ ಅಷ್ಟೇ ಜಾಗರೂಕತೆಯಿಂದ ಗಮನಹರಿಸಬೇಕು! |
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!