ತನಿಖೆ ಪೂರ್ಣಗೊಂಡ ನಂತರ ಬಾಂಗ್ಲಾದೇಶಕ್ಕೆ ಕಳುಹಿಸಲಾಗುವುದು!

ಚಂಡೀಗಢ – ಹರಿಯಾಣ ಪೊಲೀಸರು ರಾಜ್ಯದ ಕರ್ನಾಲ್ ಜಿಲ್ಲೆಯ ಘರಾಉಂದಾ ಪ್ರದೇಶದಿಂದ 17 ಬಾಂಗ್ಲಾದೇಶಿ ನಾಗರಿಕರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಮಹಿಳೆಯರು ಸೇರಿದ್ದು, ಇವರೆಲ್ಲರೂ ಅಲ್ಲಿನ ವಿವಿಧ ಕಾರ್ಖಾನೆಗಳಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ 17 ಜನರಲ್ಲಿ 13 ಮಂದಿ ಬಾಂಗ್ಲಾದೇಶಿ ವಲಸಿಗರು ಎಂದು ಪೊಲೀಸರು ಶಂಕಿಸಿದ್ದಾರೆ.
ಸ್ಥಳೀಯ ಮಾಧ್ಯಮಗಳ ಪ್ರಕಾರ, ಇವರೆಲ್ಲರ ತನಿಖೆ ಪೂರ್ಣಗೊಂಡ ನಂತರ ಅವರನ್ನು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಲಾಗುವುದು. ಇದರ ಜೊತೆಗೆ, ಸರಕಾರಕ್ಕೆ ಯಾವುದೇ ಮಾಹಿತಿ ನೀಡದೆ ಅವರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದ ಕಾರ್ಖಾನೆ ಮಾಲೀಕರನ್ನೂ ವಿಚಾರಣೆ ಮಾಡಲಾಗುತ್ತಿದೆ.
ಸಂಪಾದಕೀಯ ನಿಲುವುಯಾವುದೇ ಕ್ರಮ ಕೈಗೊಳ್ಳದೆ ಬಾಂಗ್ಲಾದೇಶಕ್ಕೆ ಕಳುಹಿಸಿದರೆ, ಅವರು ಮತ್ತೆ ಭಾರತಕ್ಕೆ ಬರುವುದು ಸುಲಭವಾಗುತ್ತದೆ. ಇಂತಹ ಹಾಸ್ಯಾಸ್ಪದ ಕ್ರಮ ಕೈಗೊಳ್ಳುವ ಬದಲು, ಇಂತವರಿಗೆ ಗಲ್ಲು ಶಿಕ್ಷೆ ವಿಧಿಸಲು ಪೊಲೀಸರು ಪ್ರಯತ್ನಿಸಬೇಕು. ಈ ಮಾಹಿತಿಯನ್ನು ದೇಶಾದ್ಯಂತ ಪ್ರಚಾರ ಮಾಡಬೇಕು. ಆಗ ಮಾತ್ರ ದೇಶದ ಮೂಲಭೂತ ಭದ್ರತೆಗೆ ಧಕ್ಕೆ ತರುತ್ತಿರುವ ಕೋಟ್ಯಂತರ ಬಾಂಗ್ಲಾದೇಶಿ ವಲಸಿಗರ ಮೇಲೆ ನಿಯಂತ್ರಣ ಸಾಧಿಸಲು ಸಾಧ್ಯ ಎಂಬುದನ್ನು ಗಮನಿಸಬೇಕು. |
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!
ಒಡಿಶಾ: ಇಂಜಿನಿಯರ್ನಿಂದ ಕೋಟ್ಯಂತರ ರೂಪಾಯಿಗಳ ಅಕ್ರಮ ಆಸ್ತಿ ವಶ
ಗೃಹಬಳಕೆ ಸಿಲಿಂಡರ್ ಬೆಲೆ ೨೯ ರೂಪಾಯಿ ಹೆಚ್ಚಳ
ಹಕೀಂಪುರ (ಬಂಗಾಳ): ತಾಯ್ನಾಡಿಗೆ ಮರಳಲು ಪ್ರತಿದಿನ ಗಡಿ ಭಾಗಕ್ಕೆ ಬರುತ್ತಿರುವ 200-300 ಬಾಂಗ್ಲಾದೇಶಿಗರು !
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!