ಗೋಮಾಂಸ ಸಾಗಿಸುತ್ತಿದ್ದ ವಾಹನ ತಡೆದು ದಾಳಿ ಮಾಡಿದ ಆರೋಪದ ಮೇಲೆ ಹಿಂದುತ್ವನಿಷ್ಠರ ವಿರುದ್ಧ ಪ್ರಕರಣ ದಾಖಲು!

ಬೆಂಗಳೂರುದಲ್ಲಿನ ಘಟನೆ

ಬೆಂಗಳೂರು – ಗೋಮಾಂಸ ಸಾಗಿಸುತ್ತಿದ್ದ ಸರಕು ವಾಹನವನ್ನು ತಡೆದು ಚಾಲಕ ಮತ್ತು ಇನ್ನೊಬ್ಬ ವ್ಯಕ್ತಿಗೆ ಹಲ್ಲೆ ಮಾಡಿದ ಆರೋಪದ ಮೇಲೆ ಹಿಂದುತ್ವನಿಷ್ಠ ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬಾಗಲಗುಂಟೆ ಪೊಲೀಸರು ಅವರನ್ನು ಬಂಧಿಸಿ ವಿಚಾರಣೆ ನಡೆಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

‘ಟಿ. ದಾಸರಹಳ್ಳಿ ಫ್ಲೈಓವರ್’ ಬಳಿ ಕರುವಿನ ಮಾಂಸವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಹೀಂದ್ರಾ ಬೊಲೆರೋ ಸರಕು ವಾಹನ ಸಮೇತ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಮಾಂಸದ ಮಾದರಿಯನ್ನು ತೆಗೆದುಕೊಂಡು ಅದು ಕರುವಿನ ಮಾಂಸವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.