|

ನವದೆಹಲಿ – ಉತ್ತರಾಖಂಡ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿನ ಕಾವಡ ಯಾತ್ರೆಯ ಮಾರ್ಗದಲ್ಲಿರುವ ರೆಸ್ಟೋರೆಂಟ್ ಗಳು, ಹೋಟೆಲ್ ಗಳು ಮತ್ತು ಢಾಬಾಗಳು ಮಾನ್ಯತೆ ಹೊಂದಿದ ನೋಂದಣಿ ಮತ್ತು ಪರವಾನಗಿ (ಲೈಸೆನ್ಸ್) ತೋರಿಸುವುದನ್ನು ಕಡ್ಡಾಯಗೊಳಿಸಿದ ರಾಜ್ಯ ಸರಕಾರಗಳ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಸರ್ವೋಚ್ಚ ನ್ಯಾಯಾಲಯ ನಿರಾಕರಿಸಿದೆ. ಸರಕಾರಗಳ ಈ ಆದೇಶದ ಕಾನೂನುಬದ್ಧತೆಯನ್ನು ಪರಿಶೀಲಿಸಲಾಗುವುದಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟಪಡಿಸಿದೆ. ಇದರಿಂದಾಗಿ, ಸಂಬಂಧಪಟ್ಟ ಎಲ್ಲ ಹೋಟೆಲ್ ಮತ್ತು ಅಂಗಡಿ ಮಾಲೀಕರು ಕಾನೂನಿನ ಪ್ರಕಾರ ಅಗತ್ಯವಿರುವ ನೋಂದಣಿ ಮತ್ತು ಪರವಾನಗಿ ದಾಖಲೆಗಳನ್ನು ತೋರಿಸುವುದು ಕಡ್ಡಾಯವಾಗಿದೆ. “ನಾವು ಈ ಪ್ರಕರಣದ ವಿವಾದದಲ್ಲಿ ಭಾಗಿಯಾಗುವುದಿಲ್ಲ. ಈ ಅರ್ಜಿಯನ್ನು ಮುಕ್ತಾಯಗೊಳಿಸಲಾಗುತ್ತಿದೆ” ಎಂದು ನ್ಯಾಯಾಲಯ ಹೇಳಿದೆ.
ಯಾವ ಪ್ರಕರಣ?ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರಕಾರಗಳು ಕಾವಡ ಯಾತ್ರೆಯ ಮಾರ್ಗದಲ್ಲಿರುವ ಎಲ್ಲ ಆಹಾರ ಮಾರಾಟ ಕೇಂದ್ರಗಳಿಗೆ ‘ಕ್ಯೂಆರ್ ಕೋಡ್’ ಹಾಕುವುದು ಮತ್ತು ಮಾನ್ಯತೆಯನ್ನು ತೋರಿಸುವುದನ್ನು ಕಡ್ಡಾಯಗೊಳಿಸಿದ್ದವು. ಇದನ್ನು ಕೆಲವು ಕಮ್ಯುನಿಸ್ಟ್ ಕಾರ್ಯಕರ್ತರು ವಿರೋಧಿಸಿ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ನ್ಯಾಯಾಲಯವು ಅವರ ಅರ್ಜಿಯನ್ನು ತಿರಸ್ಕರಿಸುತ್ತಾ ರಾಜ್ಯ ಸರಕಾರಗಳ ನಿರ್ಧಾರವನ್ನು ಎತ್ತಿಹಿಡಿದಿದೆ. |
ಸಂಪಾದಕೀಯ ನಿಲುವು
|
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !