ಸನ್ಮಾನ್ ಕ್ಯಾಪಿಟಲ್ ಲಿಮಿಟೆಡ್’ನಲ್ಲಿ ಹಣ ದುರುಪಯೋಗ ಪ್ರಕರಣ

ನವದೆಹಲಿ – ‘ಸನ್ಮಾನ್ ಕ್ಯಾಪಿಟಲ್ ಲಿಮಿಟೆಡ್’ (ಹಿಂದಿನ ಇಂಡಿಯಾಬುಲ್ಸ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್) ಪ್ರವರ್ತಕರು ಹಣ ದುರುಪಯೋಗ ಮಾಡಿದ್ದಾರೆ ಎಂಬ ಗಂಭೀರ ಆರೋಪಗಳ ಕುರಿತು ವಿಶೇಷ ತನಿಖಾ ದಳದ ಮೂಲಕ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ದೆಹಲಿ ಹೈಕೋರ್ಟ್ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದೆ.
ಈ ವಿಚಾರಣೆಗೆ ಕೇಂದ್ರ ತನಿಖಾ ದಳ (ಸಿಬಿಐ) ಹಾಜರಾಗದಿದ್ದಕ್ಕೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. “ನಾವು ಈ ವರ್ತನೆಯನ್ನು ಒಪ್ಪುವುದಿಲ್ಲ. ನಾವು ನೋಟಿಸ್ ನೀಡಿದ ನಂತರ ಅವರು ನ್ಯಾಯಾಲಯಕ್ಕೆ ಹಾಜರಾಗಲೇಬೇಕು. ಅವರು ಸುಪ್ರೀಂ ಕೋರ್ಟ್ಗೆ ಹಾಜರಾಗುವುದಿಲ್ಲ ಎಂದು ಹೇಗೆ ಹೇಳಬಹುದು? ಅವರಿಗೆ ನ್ಯಾಯಾಲಯಕ್ಕೆ ಬರುವ ಧೈರ್ಯವೂ ಇಲ್ಲವೇ?” ಎಂದು ನ್ಯಾಯಾಲಯ ಸಿಬಿಐಗೆ ತರಾಟೆಗೆ ತೆಗೆದುಕೊಂಡಿತು.
ಈ ಸಂದರ್ಭದಲ್ಲಿ, ಹೆಚ್ಚುವರಿ ಸಾಲಿಸಿಟರ್ ಜನರಲ್ ಒಂದು ವಾರದ ಸಮಯಾವಕಾಶ ಕೇಳಿದರು. ನ್ಯಾಯಾಲಯ ಇದಕ್ಕೆ ಸಮ್ಮತಿಸಿತು. ಸಿಬಿಐಗೆ ಕ್ರಮ ಕೈಗೊಳ್ಳಲು ಔಪಚಾರಿಕ ದೂರುದಾರರ ಅಗತ್ಯವಿಲ್ಲ ಎಂದು ನ್ಯಾಯಾಲಯ ಈ ಸಂದರ್ಭದಲ್ಲಿ ನೆನಪಿಸಿತು.
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ