ಆರೋಪಿಗಳು ಯಾರನ್ನೂ ಬಲವಂತವಾಗಿ ಮತಾಂತರ ಮಾಡಿಲ್ಲವಾದ್ದರಿಂದ ಪ್ರಚಾರ ಮಾಡುವುದು ಅಪರಾಧವಲ್ಲ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ಅಭಿಪ್ರಾಯ.

ಬೆಂಗಳೂರು – ಜಮಖಂಡಿ ನಗರದ ರಾಮತೀರ್ಥ ದೇವಾಲಯದಲ್ಲಿ ಇಸ್ಲಾಂ ಧರ್ಮದ ಪ್ರಚಾರ ಮಾಡುತ್ತಾ ಕರಪತ್ರಗಳನ್ನು ಹಂಚುತ್ತಿದ್ದ 3 ಮುಸಲ್ಮಾನರ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ಕರ್ನಾಟಕ ಉಚ್ಚ ನ್ಯಾಯಾಲಯವು ರದ್ದುಗೊಳಿಸಿದೆ.
1. ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ವೆಂಕಟೇಶ ನಾಯಕ್ ಅವರು ಈ ಪ್ರಕರಣದಲ್ಲಿ ಯಾವುದೇ ವ್ಯಕ್ತಿ ಮತಾಂತರದ ನೇರ ಬಲಿಪಶುವಾಗಿದ್ದಾರೆ ಅಥವಾ ಅವರ ಮೇಲೆ ಒತ್ತಡ ಹೇರಲಾಗಿದೆ ಎಂದು ದೂರು ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಕರಣದಲ್ಲಿ ಹೇಳಿರುವ ಮಾಹಿತಿ ನಿಜವೆಂದು ಪರಿಗಣಿಸಿದರೂ, ಈ ಮುಸಲ್ಮಾನರು ದೇವಾಲಯದಲ್ಲಿ ಯಾರನ್ನೂ ಬಲವಂತವಾಗಿ ಅಥವಾ ಒತ್ತಡಕ್ಕೆ ಸಿಲುಕಿಸಿ ಇಸ್ಲಾಂ ಧರ್ಮವನ್ನು ಸ್ವೀಕರಿಸಲು ಒತ್ತಾಯಿಸಿಲ್ಲ. ಆದ್ದರಿಂದ, ಅವರ ವಿರುದ್ಧ ಮತಾಂತರ ವಿರೋಧಿ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಲು ಆಧಾರವಿಲ್ಲ ಮತ್ತು ಅದಕ್ಕಾಗಿಯೇ ಪ್ರಕರಣವನ್ನು ರದ್ದುಗೊಳಿಸಲಾಗುತ್ತಿದೆ.
2. ದೂರಿನ ಪ್ರಕಾರ, ಮೂವರು ಆರೋಪಿಗಳು ಇಸ್ಲಾಂ ಧರ್ಮವನ್ನು ಹೊಗಳುತ್ತಿದ್ದರು ಮತ್ತು ಹಿಂದೂ ಧರ್ಮದ ಬಗ್ಗೆ ಕೆಟ್ಟ ಪದಗಳನ್ನು ಬಳಸುತ್ತಿದ್ದರು. ಅಷ್ಟೇ ಅಲ್ಲದೆ, ಇಸ್ಲಾಂ ಸ್ವೀಕರಿಸಿದರೆ ದುಬೈನಲ್ಲಿ ಕೆಲಸ ಮತ್ತು ವಾಹನಗಳನ್ನು ನೀಡುವುದಾಗಿ ಆಮಿಷವೊಡ್ಡಿದ್ದರು ಎಂದು ಆರೋಪಿಸಲಾಗಿತ್ತು. ಅವರ ವಿರುದ್ಧ ಕರ್ನಾಟಕದ ಮತಾಂತರ ವಿರೋಧಿ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಬಂಧನದ ನಂತರ ಈ ಮೂವರು ಉಚ್ಚ ನ್ಯಾಯಾಲಯಕ್ಕೆ ಪ್ರಕರಣ ರದ್ದುಪಡಿಸುವಂತೆ ಮನವಿ ಮಾಡಿದ್ದರು. ಈ ಮನವಿಯನ್ನು ನ್ಯಾಯಾಲಯವು ಒಪ್ಪಿಕೊಂಡಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!