ಭಯೋತ್ಪಾದಕ ದಾಳಿಗೆ ಪ್ರತ್ಯುತ್ತರವೆಂದು ‘ಆಪರೇಷನ್ ಸಿಂಧೂರ’ ನಡೆಸಲಾಯಿತು! : Operation Sindoor

  • ಕೇಂದ್ರ ಸರಕಾರದಿಂದ ಸಂಸತ್ತಿನಲ್ಲಿ ಮೊದಲ ಬಾರಿಗೆ ಮಾಹಿತಿ

  • ಪಾಕಿಸ್ತಾನದ ಮನವಿಯ ಮೇರೆಗೆ ಕದನ ವಿರಾಮ ಒಪ್ಪಿಕೊಂಡಿದ್ದನ್ನು ಸಹ ಸ್ಪಷ್ಟ

ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿವರ್ಧನ್ ಸಿಂಗ್

ನವದೆಹಲಿ – ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕರು ನಡೆಸಿದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ‘ಆಪರೇಷನ್ ಸಿಂಧೂರ’ವನ್ನು ಪ್ರಾರಂಭಿಸಿದೆ ಎಂದು ಕೇಂದ್ರ ಸರಕಾರ ಇದೇ ಮೊದಲ ಬಾರಿಗೆ ಸಂಸತ್ತಿನಲ್ಲಿ ಮಾಹಿತಿ ನೀಡಿದೆ.

ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿವರ್ಧನ್ ಸಿಂಗ್ ಅವರು ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ, ‘ಆಪರೇಷನ್ ಸಿಂಧೂರ’ದ ಅಡಿಯಲ್ಲಿ ಭಾರತವು ಮೇ ೭, ೨೦೨೫ ರಂದು ಪಾಕಿಸ್ತಾನದ ೯ ಭಯೋತ್ಪಾದಕ ಶಿಬಿರಗಳನ್ನು ನಾಶಪಡಿಸಿತು. ಇದರ ನಂತರ, ಪಾಕಿಸ್ತಾನವು ಭಾರತೀಯ ಸೇನಾ ನೆಲೆಗಳು ಮತ್ತು ನಾಗರಿಕರ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು; ಆದರೆ ಇದಕ್ಕೆ ತೀವ್ರ ಪ್ರತಿಕ್ರಿಯೆ ನೀಡಲಾಯಿತು. ಪಾಕಿಸ್ತಾನ ಸೇನೆಗೆ ಭಾರಿ ನಷ್ಟವಾಯಿತು. ಮೇ ೧೦ ರಂದು, ಪಾಕಿಸ್ತಾನದ ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕರು ಭಾರತೀಯ ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕರನ್ನು ಸಂಪರ್ಕಿಸಿ, ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ವಿನಂತಿಸಿದರು. ಅದೇ ದಿನದ ನಂತರ, ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಲಾಯಿತು.