ಹಿಮಾಚಲ ಪ್ರದೇಶದ ಜಲಪಾತದ ಬಳಿ ನಡೆದ ಪ್ರಸಂಗ

ನವದೆಹಲಿ – ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಜಲಪಾತದ ಬಳಿ ವಿದೇಶಿ ಪ್ರವಾಸಿಗರೊಬ್ಬರು ಅಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಮತ್ತು ಕಸವನ್ನು ಎತ್ತಿ ಕಸದ ಬುಟ್ಟಿಗೆ ಹಾಕುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು, “ನಾನು ಪ್ರತಿದಿನ ಇಲ್ಲಿ ಕುಳಿತು ಜನರಿಗೆ – ‘ಕಸ ಎತ್ತಿ ಮತ್ತು ಪರಿಸರವನ್ನು ಸ್ವಚ್ಛವಾಗಿಡಿ'” ಎಂದು ಹೇಳುತ್ತೇನೆ ಎಂದು ಹೇಳುತ್ತಿರುವುದು ಸೆರೆಯಾಗಿದೆ. ‘ಎಕ್ಸ್’ ನಲ್ಲಿ ಈ ವಿಡಿಯೋ ವ್ಯಾಪಕವಾಗಿ ಹರಡಿದೆ.
ಈ ವಿಡಿಯೋಗೆ ಜನರು ವ್ಯಕ್ತಪಡಿಸಿದ ಪ್ರತಿಕ್ರಿಯೆಗಳು ಹೀಗಿವೆ:
1. ಸ್ವಚ್ಛತೆ ಕಾಪಾಡುವ ಜವಾಬ್ದಾರಿ ಭಾರತೀಯರದ್ದಾಗಿರಬೇಕು; ಆದರೆ ಅದನ್ನು ಒಬ್ಬ ವಿದೇಶಿ ವ್ಯಕ್ತಿ ನಿಭಾಯಿಸುತ್ತಿದ್ದಾರೆ.
2. ಒಬ್ಬ ವಿದೇಶಿ ಇಲ್ಲಿ ಸ್ವಚ್ಛಗೊಳಿಸುತ್ತಿರುವುದು ನಾಚಿಕೆಗೇಡಿನ ಸಂಗತಿ. ನಮ್ಮ ಜನರು ಮಾತ್ರ ಕಸ ಹಾಕುತ್ತಾ ಕುಳಿತುಕೊಳ್ಳುತ್ತಾರೆ.
3. ಇದು ನಮ್ಮ ಮನಃಸ್ಥಿತಿಯ ಸಮಸ್ಯೆ. ಸ್ವಚ್ಛತೆಯನ್ನು ಕಾಪಾಡುವುದು ಸರಕಾರದ ಕೆಲಸ ಎಂದು ಜನರು ಭಾವಿಸುತ್ತಾರೆ; ಆದರೆ ಅದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ.
4. ನಮ್ಮ ಚಿಂತನೆ ಬದಲಾಗುವವರೆಗೂ ದೇಶ ಸ್ವಚ್ಛವಾಗುವುದಿಲ್ಲ.
ಸಂಪಾದಕೀಯ ನಿಲುವುಇದು ಭಾರತೀಯರಿಗೆ ನಾಚಿಕೆಗೇಡಿನ ಸಂಗತಿ! ‘ಭಾರತೀಯರು ಸ್ವಚ್ಛತೆ ಕಾಪಾಡಬೇಕು’ ಎಂದು ವಿದೇಶಿಯರು ಹೇಳಬೇಕಾಗಿ ಬಂದರೆ, ಇದಕ್ಕಿಂತ ದುರದೃಷ್ಟಕರ ಸಂಗತಿ ಇನ್ನೊಂದಿದೆಯೇ? |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ