ದೆಹಲಿ ಉಚ್ಚ ನ್ಯಾಯಾಲಯದ ತೀರ್ಪು

ನವ ದೆಹಲಿ – ಕೋವಿಡ್ ಸಾಂಕ್ರಾಮಿಕದ ಮೊದಲ ಅಲೆಯ ಸಮಯದಲ್ಲಿ, ತಬ್ಲೀಘಿ ಜಮಾತ್ ನ ಪ್ರಧಾನ ಕಚೇರಿಯ ಶಿಬಿರದಲ್ಲಿ ಭಾಗವಹಿಸಿದ್ದ ವಿದೇಶಿ ಪ್ರಜೆಗಳಿಗೆ ತಮ್ಮ ಮನೆಗಳಲ್ಲಿ ಆಶ್ರಯ ನೀಡಿದ ಭಾರತೀಯ ನಾಗರಿಕರ ವಿರುದ್ಧ ದಾಖಲಿಸಲಾದ ಪ್ರಕರಣಗಳ ಬಗ್ಗೆ ದೆಹಲಿ ಉಚ್ಚ ನ್ಯಾಯಾಲಯ ತೀರ್ಪು ನೀಡಿದೆ. ನ್ಯಾಯಾಲಯವು 70 ಭಾರತೀಯ ನಾಗರಿಕರ ಮೇಲಿನ 16 ಪ್ರಕರಣಗಳನ್ನು ರದ್ದುಗೊಳಿಸಲು ಆದೇಶಿಸಿದೆ. ಪ್ರಸ್ತುತ ಪರಿಸ್ಥಿತಿ ಮತ್ತು ಲಭ್ಯವಿರುವ ಪುರಾವೆಗಳನ್ನು ಗಮನಿಸಿದರೆ, ಈ ಪ್ರಕರಣವನ್ನು ಮುಂದುವರಿಸುವುದು ನ್ಯಾಯದ ಹಿತಾಸಕ್ತಿಯಲ್ಲಿರುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಯಾವ ಆರೋಪ?
ಈ ಪ್ರಕರಣದಲ್ಲಿ 70 ಭಾರತೀಯ ನಾಗರಿಕರು ಸುಮಾರು 190 ವಿದೇಶಿ ನಾಗರಿಕರಿಗೆ ತಮ್ಮ ಮನೆಗಳಲ್ಲಿ ಆಶ್ರಯ ನೀಡಿದ್ದರು ಎಂಬ ಆರೋಪವಿತ್ತು. ಈ ನಾಗರಿಕರು ಮಾರ್ಚ್ 2020 ರಲ್ಲಿ ದೆಹಲಿಯ ನಿಜಾಮುದ್ದೀನ್ ನಲ್ಲಿರುವ ತಬ್ಲೀಘಿ ಜಮಾತ್ ನ ಪ್ರಧಾನ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ದೆಹಲಿ ಪೊಲೀಸರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ, ಸಾಂಕ್ರಾಮಿಕ ರೋಗ ಕಾಯಿದೆ, ವಿಪತ್ತು ನಿರ್ವಹಣಾ ಕಾಯಿದೆ ಮತ್ತು ವಿದೇಶಿ ನಾಗರಿಕ ಕಾಯಿದೆಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿದ್ದರು. ಲಾಕ್ಡೌನ್ ಸಮಯದಲ್ಲಿ ಸರಕಾರದ ಆದೇಶಗಳನ್ನು ಉಲ್ಲಂಘಿಸಿ ಈ ಆರೋಪಿಗಳು ವಿದೇಶಿ ನಾಗರಿಕರನ್ನು ತಮ್ಮ ಮನೆಗಳಲ್ಲಿ ಇರಿಸಿಕೊಳ್ಳುವುದು ನಿಯಮಗಳ ಉಲ್ಲಂಘನೆಯಾಗಿದೆ ಎಂದು ಪೊಲೀಸರು ಹೇಳಿದ್ದರು.
ಆರೋಪಿಗಳ ನ್ಯಾಯವಾದಿಗಳು, ಆರೋಪಿಗಳಿಗೆ ಯಾವುದೇ ಅಪರಾಧದ ಉದ್ದೇಶವಿರಲಿಲ್ಲ ಮತ್ತು ಅವರನ್ನು ದೋಷಿಗಳೆಂದು ಸಾಬೀತುಪಡಿಸಲು ಯಾವುದೇ ದೃಢವಾದ ಪುರಾವೆಗಳು ಲಭ್ಯವಿಲ್ಲ ಎಂದು ವಾದಿಸಿದರು.
ತಬ್ಲೀಘಿ ಜಮಾತ್ ಎಂದರೇನು?ತಬ್ಲೀಘಿ ಜಮಾತ್ ಒಂದು ಧಾರ್ಮಿಕ ಸಮೂಹವಾಗಿದ್ದು, ಇಸ್ಲಾಂ ಧರ್ಮವನ್ನು ಪ್ರಚಾರ ಮಾಡುವುದು ಇದರ ಮುಖ್ಯ ಉದ್ದೇಶವಾಗಿದೆ. ಭಾರತ ಸೇರಿದಂತೆ ವಿಶ್ವದಾದ್ಯಂತ ಈ ಜಮಾತ್ ಸಕ್ರಿಯವಾಗಿದೆ. ಅವರ ಸದಸ್ಯರ ಸಣ್ಣ ಗುಂಪುಗಳು ದೇಶ-ವಿದೇಶಗಳಲ್ಲಿ ಪ್ರಯಾಣಿಸುವುದು ಅವರ ಕಾರ್ಯವಿಧಾನದ ಭಾಗವಾಗಿದೆ. ವಿಶೇಷವೆಂದರೆ, ಮುಸ್ಲಿಂ ಆಕ್ರಮಣಕಾರರು ಭಾರತದಲ್ಲಿ ಹಿಂದೂಗಳನ್ನು ಬಲವಂತವಾಗಿ ಮತಾಂತರ ಮಾಡಿದ ನಂತರ ಅವರಿಗೆ ಇಸ್ಲಾಂನ ಸಂಪ್ರದಾಯಗಳನ್ನು ಕಲಿಸಲು ಈ ಗುಂಪನ್ನು ಸ್ಥಾಪಿಸಲಾಯಿತು ಎಂದು ಹೇಳಲಾಗುತ್ತದೆ. |
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ