ದಾಳಿ ಮಾಡಿದವರು 5 ಅಪ್ರಾಪ್ತ ಮಕ್ಕಳು, 4 ಜನರ ಬಂಧನ

ಮೆಲ್ಬರ್ನ್ (ಆಸ್ಟ್ರೇಲಿಯಾ) – ಇಲ್ಲಿನ ‘ಸೆಂಟ್ರಲ್ ಸ್ಕ್ವೇರ್ ಶಾಪಿಂಗ್ ಸೆಂಟರ್’ ಹೊರಗೆ ಐವರು ಅಪ್ರಾಪ್ತ ಮಕ್ಕಳು ಭಾರತೀಯ ಮೂಲದ ಸೌರಭ ಆನಂದ ಅವರ ಮೇಲೆ ದಾಳಿ ಮಾಡಿ ಅವರ ಮಣಿಕಟ್ಟನ್ನು ಕತ್ತರಿಸಿದ್ದಾರೆ. ಒಬ್ಬ ಹುಡುಗ ಅವನರಿಗೆ ಗುದ್ದಿದರೆ, ಇನ್ನೊಬ್ಬನು ಅವರ ಕುತ್ತಿಗೆಗೆ ಚಾಕು ಹಿಡಿದನು. ಸೌರಭ ಆನಂದ ತಮ್ಮನ್ನು ರಕ್ಷಿಸಿಕೊಳ್ಳಲು ಕೈ ಎತ್ತಿದಾಗ, ಆ ಹುಡುಗ ಅದೇ ಚಾಕುವಿನಿಂದ ಆನಂದ ಅವರ ಮಣಿಕಟ್ಟನ್ನು ಕತ್ತರಿಸಿದ್ದಾನೆ. ಈ ಪ್ರಕರಣದಲ್ಲಿ, ಪೊಲೀಸರು ಐವರು ಆರೋಪಿಗಳಲ್ಲಿ ನಾಲ್ವರನ್ನು ಬಂಧಿಸಿದ್ದಾರೆ.
1. ಈ ಘಟನೆಯ ಬಗ್ಗೆ ಸೌರಭ ಆನಂದ, ಅವರು ಸಂಜೆ ಔಷಧಿ ಅಂಗಡಿಯಿಂದ ಔಷಧಿ ತೆಗೆದುಕೊಂಡು ಹಿಂತಿರುಗುತ್ತಿದ್ದರು. ಈ ಸಮಯದಲ್ಲಿ ಅವರು ಸ್ನೇಹಿತನೊಂದಿಗೆ ದೂರವಾಣಿಯಲ್ಲಿ ಮಾತನಾಡುತ್ತಿದ್ದರು. ಆಗ ಐವರು ಮಕ್ಕಳು ಹಿಂಭಾಗದಿಂದ ಅವರ ಮೇಲೆ ದಾಳಿ ಮಾಡಿದರು. ಇದರಿಂದ ಅವರ ಬೆನ್ನುಮೂಳೆ ಮುರಿಯಿತು, ತಲೆಗೆ ಗಾಯಗಳಾಗಿವೆ. ಅವರ ಕೈ ಪೂರ್ಣವಾಗಿ ಕಳಚಿತ್ತು.
2. ಈ ಸಮಯದಲ್ಲಿ ಸೌರಭ ಆನಂದ ಅವರ ಕೂಗಾಟ ಕೇಳಿ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಹಲವು ಗಂಟೆಗಳ ಶಸ್ತ್ರಚಿಕಿತ್ಸೆಯ ನಂತರ ಅವರ ಕೈಯನ್ನು ಮತ್ತೆ ಜೋಡಿಸಲಾಯಿತು.
ವೈದ್ಯರು ಅವರ ಸ್ಥಿತಿಯ ಸುಧಾರಣೆಯ ಬಗ್ಗೆ ಸದ್ಯಕ್ಕೆ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಸಂಪಾದಕೀಯ ನಿಲುವುಕಳೆದ ಕೆಲವು ದಿನಗಳಲ್ಲಿ ಆಸ್ಟ್ರೇಲಿಯಾ ಮತ್ತು ಇತರ ದೇಶಗಳಲ್ಲಿ ಭಾರತೀಯರ ಮೇಲೆ ಜನಾಂಗೀಯ ದ್ವೇಷದಿಂದ ನಡೆಯುತ್ತಿರುವ ದಾಳಿಗಳ ಹಿಂದೆ ಅಂತರರಾಷ್ಟ್ರೀಯ ಪಿತೂರಿ ಇದೆಯೇ ಎಂದು ಭಾರತ ಸರಕಾರವು ತನಿಖೆ ನಡೆಸಬೇಕು ಮತ್ತು ಇಂತಹ ಘಟನೆಗಳನ್ನು ತಡೆಯಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು! |
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ
ಫ್ರಾನ್ಸ್ ಸರಕಾರವು ಇನ್ನು ಮುಂದೆ ‘ಶೂನ್ಯ ಸಹಿಷ್ಣುತೆ’ಯ ನೀತಿಯನ್ನು ಅಳವಡಿಸಿಕೊಳ್ಳಲಿ !
ಬಾಂಗ್ಲಾದೇಶದ ವಿರೋಧದಿಂದಾಗಿ ನುಸುಳುಕೋರರನ್ನು ಗಡಿಯಿಂದ ಹಿಂತಿರುಗಿಸುವುದು ಕಷ್ಟವಾಗುತ್ತಿದೆ !