ಮಂದಿರಕ್ಕೆ ಹೋಗುವ ಮೆಟ್ಟಿಲುಗಳ ಮೇಲೆ ವಿದ್ಯುತ್ ಪ್ರವಾಹದ ವದಂತಿ ಹರಡಿದ್ದರಿಂದ ಅಪಘಾತ

ಹರಿದ್ವಾರ (ಉತ್ತರಾಖಂಡ) – ಜುಲೈ 28 ರಂದು ಬೆಳಿಗ್ಗೆ 9:15 ಕ್ಕೆ ಹರಿದ್ವಾರದ ಮಾನಸಾ ದೇವಿ ದೇವಾಲಯದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ, ಇಲ್ಲಿಯವರೆಗೆ 6 ಜನರು ಸಾವನ್ನಪ್ಪಿದ್ದು, 35 ಜನರು ಗಾಯಗೊಂಡಿದ್ದಾರೆ. “ದೇವಾಲಯಕ್ಕೆ ಹೋಗುವ ಮೆಟ್ಟಿಲುಗಳ ಮೇಲೆ ವಿದ್ಯುತ್ ಪ್ರವಾಹವಿದೆ ಎಂಬ ವದಂತಿ ಹರಡಿದ್ದರಿಂದ ಹೆದರಿದ ಜನರು ಓಡಲು ಪ್ರಾರಂಭಿಸಿದರು,” ಎಂದು ಪೊಲೀಸರು ತಿಳಿಸಿದ್ದಾರೆ. ಮತ್ತೊಂದೆಡೆ, ಗಡ್ವಾಲ್ ವಿಭಾಗದ ಆಯುಕ್ತ ವಿನಯ ಶಂಕರ ಪಾಂಡೆ ಅವರು, ದೇವಾಲಯದಲ್ಲಿ ಅತಿಯಾದ ಜನಸಂದಣಿಯಿಂದ ಈ ಅಪಘಾತ ಸಂಭವಿಸಿದೆ ಎಂದು ಹೇಳಿದರು.
ಮಾನಸಾ ದೇವಿ ದೇವಾಲಯವು ಹರಿದ್ವಾರದ ಶಿವಾಲಿಕ ಬೆಟ್ಟಗಳಲ್ಲಿರುವ ಬಿಲ್ವ ಪರ್ವತದ ಮೇಲೆ ಇದೆ. ಇದು ಹರ್-ಕಿ-ಪೌಡಿಯಿಂದ 3 ಕಿ.ಮೀ ದೂರದಲ್ಲಿದ್ದು ಅಲ್ಲಿಂದ 1.5 ಕಿ.ಮೀ ಏರಿ ಹೋಗಿ (ಹತ್ತುವುದರ ಮೂಲಕ) ಅಥವಾ ‘ರೋಪ್ ವೇ’ (ಹಗ್ಗದ ಮೂಲಕ) ಮೂಲಕ ತಲುಪಬಹುದು.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !