
ಬಾರಾಬಂಕಿ (ಉತ್ತರ ಪ್ರದೇಶ) – ಇಲ್ಲಿನ ಔಸನೇಶ್ವರ ಮಹಾದೇವ ದೇವಸ್ಥಾನದಲ್ಲಿ ಜುಲೈ 27ರಂದು ರಾತ್ರಿ 2 ಗಂಟೆಗೆ ಜಲಾಭಿಷೇಕದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಇಬ್ಬರು ಸಾವನ್ನಪ್ಪಿದ್ದು, 29 ಮಂದಿ ಗಾಯಗೊಂಡಿದ್ದಾರೆ. ದೇವಸ್ಥಾನದ ಆವರಣದಲ್ಲಿ ವಿದ್ಯುತ್ ಪ್ರವಾಹ ಹಠಾತ್ತಾಗಿ ಹರಡಿದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಗಾಯಗೊಂಡ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಿಲ್ಲಾಧಿಕಾರಿ ಶಶಾಂಕ ತ್ರಿಪಾಠಿ ಅವರು ಮಾತನಾಡಿ, ಕೆಲವು ಕೋತಿಗಳು ವಿದ್ಯುತ್ ತಂತಿಯ ಮೇಲೆ ಹಾರಿದವು. ಇದರಿಂದ ತಂತಿ ಕಡಿದು ದೇವಸ್ಥಾನದ ಆವರಣದಲ್ಲಿನ ತಗಡಿನ ಛಾವಣಿಯ ಮೇಲೆ ಬಿದ್ದಿದೆ. ಪರಿಣಾಮವಾಗಿ ವಿದ್ಯುತ್ ಪ್ರವಾಹ ಹರಡಿ ಕಾಲ್ತುಳಿತದಂತಹ ಪರಿಸ್ಥಿತಿ ನಿರ್ಮಾಣವಾಯಿತು ಎಂದು ತಿಳಿಸಿದ್ದಾರೆ.
ಈ ಹಿಂದೆ ಜುಲೈ 27ರಂದು ಉತ್ತರಾಖಂಡದ ಹರಿದ್ವಾರದಲ್ಲಿರುವ ಶ್ರೀ ಮನಸಾದೇವಿ ದೇವಸ್ಥಾನದ ಹೊರಗೆ ವಿದ್ಯುತ್ ಪ್ರವಾಹದ ವದಂತಿ ಹರಡಿದ್ದರಿಂದ ಕಾಲ್ತುಳಿತ ಉಂಟಾಗಿ 8 ಮಂದಿ ಸಾವನ್ನಪ್ಪಿ 30 ಮಂದಿ ಗಾಯಗೊಂಡಿದ್ದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ