
ಬಾರಾಬಂಕಿ (ಉತ್ತರ ಪ್ರದೇಶ) – ಇಲ್ಲಿನ ಔಸನೇಶ್ವರ ಮಹಾದೇವ ದೇವಸ್ಥಾನದಲ್ಲಿ ಜುಲೈ 27ರಂದು ರಾತ್ರಿ 2 ಗಂಟೆಗೆ ಜಲಾಭಿಷೇಕದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಇಬ್ಬರು ಸಾವನ್ನಪ್ಪಿದ್ದು, 29 ಮಂದಿ ಗಾಯಗೊಂಡಿದ್ದಾರೆ. ದೇವಸ್ಥಾನದ ಆವರಣದಲ್ಲಿ ವಿದ್ಯುತ್ ಪ್ರವಾಹ ಹಠಾತ್ತಾಗಿ ಹರಡಿದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಗಾಯಗೊಂಡ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಿಲ್ಲಾಧಿಕಾರಿ ಶಶಾಂಕ ತ್ರಿಪಾಠಿ ಅವರು ಮಾತನಾಡಿ, ಕೆಲವು ಕೋತಿಗಳು ವಿದ್ಯುತ್ ತಂತಿಯ ಮೇಲೆ ಹಾರಿದವು. ಇದರಿಂದ ತಂತಿ ಕಡಿದು ದೇವಸ್ಥಾನದ ಆವರಣದಲ್ಲಿನ ತಗಡಿನ ಛಾವಣಿಯ ಮೇಲೆ ಬಿದ್ದಿದೆ. ಪರಿಣಾಮವಾಗಿ ವಿದ್ಯುತ್ ಪ್ರವಾಹ ಹರಡಿ ಕಾಲ್ತುಳಿತದಂತಹ ಪರಿಸ್ಥಿತಿ ನಿರ್ಮಾಣವಾಯಿತು ಎಂದು ತಿಳಿಸಿದ್ದಾರೆ.
ಈ ಹಿಂದೆ ಜುಲೈ 27ರಂದು ಉತ್ತರಾಖಂಡದ ಹರಿದ್ವಾರದಲ್ಲಿರುವ ಶ್ರೀ ಮನಸಾದೇವಿ ದೇವಸ್ಥಾನದ ಹೊರಗೆ ವಿದ್ಯುತ್ ಪ್ರವಾಹದ ವದಂತಿ ಹರಡಿದ್ದರಿಂದ ಕಾಲ್ತುಳಿತ ಉಂಟಾಗಿ 8 ಮಂದಿ ಸಾವನ್ನಪ್ಪಿ 30 ಮಂದಿ ಗಾಯಗೊಂಡಿದ್ದರು.
‘ಜೀವೋತ್ತಮ ವಿದ್ಯಾಪೀಠಂ’ ಸನಾತನ ಧರ್ಮದ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ! – ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ದೂರು ದಾಖಲು : ಇಬ್ಬರ ಬಂಧನ
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein