
ನವದೆಹಲಿ – ದೆಹಲಿಯ ಬೀದಿ ನಾಯಿಗಳ ಕುರಿತು ಒಂದು ಇಂಗ್ಲಿಷ್ ದಿನಪತ್ರಿಕೆಯ ವರದಿಯನ್ನು ಗಮನಿಸಿ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ಅರ್ಜಿ ಸಲ್ಲಿಸಿ ವಿಚಾರಣೆ ಆರಂಭಿಸಿದೆ.
1. “ಬೀದಿ ನಾಯಿಗಳು ನಗರವನ್ನು ಆಕ್ರಮಿಸಿವೆ ಮತ್ತು ಮಕ್ಕಳು ಅದರ ಬೆಲೆ ತೆತ್ತುತ್ತಿದ್ದಾರೆ” ಎಂಬ ಶೀರ್ಷಿಕೆಯಡಿಯಲ್ಲಿ ವರದಿ ಪ್ರಕಟವಾಗಿತ್ತು. ಇದನ್ನು ಗಮನಿಸಿದ ನ್ಯಾಯಾಲಯವು, ಪ್ರತಿದಿನ ನಗರ ಮತ್ತು ಉಪನಗರಗಳಲ್ಲಿ ನೂರಾರು ನಾಯಿ ಕಡಿತದ ಘಟನೆಗಳು ನಡೆಯುತ್ತಿದ್ದು, ಇದರಿಂದ ರೇಬೀಸ್ ಹರಡಿ ಮಕ್ಕಳು, ಶಿಶುಗಳು ಮತ್ತು ವೃದ್ಧರು ಬಲಿಯಾಗುತ್ತಿದ್ದಾರೆ. ಇದು ಅತ್ಯಂತ ತೊಂದರೆದಾಯಕ ಮತ್ತು ಚಿಂತಾಜನಕ ಎಂದು ಹೇಳಿದೆ.
2. ಇತ್ತೀಚೆಗೆ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಯಿಗಳ ದಾಳಿಯ ಹಲವು ಘಟನೆಗಳು ನಡೆದಿವೆ. ಇದರಲ್ಲಿ ಪುಟ್ಟ ಮಕ್ಕಳೂ ಸೇರಿದ್ದಾರೆ. ಪ್ರತಿದಿನ ನೂರಾರು ಇಂತಹ ಘಟನೆಗಳು ದಾಖಲಾಗುತ್ತಿರುವುದರಿಂದ, ಸಾರ್ವಜನಿಕ ಆರೋಗ್ಯದ ಅಪಾಯವು ಗಂಭೀರವಾಗಿದೆ. ಹೆಚ್ಚುತ್ತಿರುವ ಬೀದಿ ನಾಯಿಗಳ ಸಂಖ್ಯೆಯನ್ನು ನಿಯಂತ್ರಿಸಲು ಮತ್ತು ಅವುಗಳ ಲಸಿಕೆ ನೀಡಲು ಸೂಕ್ತ ವ್ಯವಸ್ಥೆ ಮಾಡುವಲ್ಲಿ ವಿಫಲವಾದ ದೆಹಲಿ ಮತ್ತು ಸುತ್ತಮುತ್ತಲಿನ ನಾಗರಿಕ ಆಡಳಿತ ಸಂಸ್ಥೆಗಳ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗುತ್ತಿದೆ.
ಸಂಪಾದಕೀಯ ನಿಲುವು
|
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!