ಬಾಂಗ್ಲಾದೇಶ ವಿಮಾನ ಅಪಘಾತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಿದ ಪ್ರಕರಣ

ಢಾಕಾ (ಬಾಂಗ್ಲಾದೇಶ) – ಬಾಂಗ್ಲಾದೇಶದ ಮಧ್ಯಂತರ ಸರಕಾರದ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನುಸ್ ಅವರು ಭಾರತ, ಚೀನಾ ಮತ್ತು ಸಿಂಗಾಪುರದಿಂದ ಬಂದ ವೈದ್ಯರ ತಂಡಗಳನ್ನು ಭೇಟಿಯಾದರು. ಈ ತಂಡದ ವೈದ್ಯರು ಢಾಕಾದಲ್ಲಿ ನಡೆದ ವಿಮಾನ ಅಪಘಾತದಲ್ಲಿ ಗಾಯಗೊಂಡವರಿಗೆ ಸಹಾಯ ಮಾಡಿದ್ದಕ್ಕಾಗಿ ಯೂನುಸ್ ಅವರು ಧನ್ಯವಾದಗಳನ್ನು ಸಲ್ಲಿಸಿದರು. ಈ ವೈದ್ಯರು ಕೇವಲ ತಮ್ಮ ಕೌಶಲ್ಯವನ್ನು ಮಾತ್ರವಲ್ಲದೆ, ಹೃದಯವನ್ನೂ ತಂದಿದ್ದಾರೆ ಎಂದು ಯೂನುಸ್ ಹೇಳಿದರು.
ಈ ಭೇಟಿಯ ಸಮಯದಲ್ಲಿ 21 ವೈದ್ಯರು ಮತ್ತು ದಾದಿಯರು ಉಪಸ್ಥಿತರಿದ್ದರು. ಈ ತಂಡವು ಢಾಕಾದ ಶಾಲೆಯ ಮೇಲೆ ವಿಮಾನ ಅಪ್ಪಳಿಸಿದ್ದರಿಂದ ಗಾಯಗೊಂಡವರಿಗೆ ಚಿಕಿತ್ಸೆ ನೀಡುತ್ತಿದೆ. ಗಾಯಗೊಂಡವರಲ್ಲಿ ಹೆಚ್ಚಿನವರು ಶಾಲಾ ಮಕ್ಕಳಿದ್ದಾರೆ. ಸಂತ್ರಸ್ತರಿಗೆ ಸಹಾಯ ಮಾಡಲು ಭಾರತವು ವೈದ್ಯಕೀಯ ಉಪಕರಣಗಳು ಮತ್ತು ವೈದ್ಯರು ಹಾಗೂ ದಾದಿಯರನ್ನು ಕಳುಹಿಸಿದೆ. ಈ ಅಪಘಾತದಲ್ಲಿ 31 ಜನರು ಮೃತಪಟ್ಟಿದ್ದರು.
ಸಂಪಾದಕೀಯ ನಿಲುವುಭಾರತದ ಗಾಂಧಿಗಿರಿ! ಭಾರತ ಈ ರೀತಿ ಗಾಂಧಿಗಿರಿ ತೋರಿಸಿದರೂ, ಸ್ವಾತಂತ್ರ್ಯವೀರ ಸಾವರಕರ್ ಅವರಂತೆ ಯುದ್ಧನೀತಿಯನ್ನೂ ಅಳವಡಿಸಿಕೊಳ್ಳುವುದು ಅವಶ್ಯಕ! |
‘ಎ ಐ’ನ ಮಿತಿಗಳು ಗಮನಕ್ಕೆ ಬರುತ್ತಿದ್ದಂತೆಯೇ ‘ಫೋರ್ಡ್’ ಸಂಸ್ಥೆಯು ನೂರಾರು ಎಂಜಿನಿಯರ್ ಗಳನ್ನು ಮರಳಿ ಕೆಲಸಕ್ಕೆ ತೆಗೆದು ಕೊಂಡಿತು!
ಬಾಂಗ್ಲಾದೇಶ: ಸೆರೆಮನೆಯಲ್ಲಿರುವ ಚಿನ್ಮಯ್ ಪ್ರಭು ಅವರ ಜೀವಕ್ಕೆ ಅಪಾಯ!
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಚೀನಾದ ಸೇನೆಯೊಂದಿಗೆ ಪ್ರತಿ ವರ್ಷ ೧ ಸಾವಿರದ, ೧೦೦ ಬಾರಿ ಮುಖಾಮುಖಿ ಮಾತುಕತೆ!