ಪ್ರಾಥಮಿಕ ಅಂದಾಜಿನಲ್ಲಿ ವೈಯಕ್ತಿಕ ದ್ವೇಷದಿಂದ ಕೊಲೆ

ಸೋನಿಪತ್ (ಹರಿಯಾಣ) – ಇಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಸೈನಿಕನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಜುಲೈ ೨೭ರ ರಾತ್ರಿ ತಡವಾಗಿ ಈ ಘಟನೆ ನಡೆದಿದೆ. ಗುಂಡಿನ ಶಬ್ದ ಕೇಳಿ ಕುಟುಂಬದ ಸದಸ್ಯರು ಅಲ್ಲಿಗೆ ಬಂದರು. ಸೈನಿಕನನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ವೈದ್ಯರು ಆತನನ್ನು ಮೃತ ಎಂದು ಘೋಷಿಸಿದರು.
ಮಗು ಹುಟ್ಟಿ ೩ ದಿನಗಳಷ್ಟೇ ಆಗಿತ್ತು!
ಸೈನಿಕನ ಹೆಸರು ಕೃಷ್ಣಾ, ಇವರು ಖೇಡಿ ದಮ್ಕನ್ ಗ್ರಾಮದ ನಿವಾಸಿಯಾಗಿದ್ದರು. ಕೃಷ್ಣಾ ಪ್ರಸ್ತುತ ಛತ್ತೀಸ್ಗಢದಲ್ಲಿ ನಿಯೋಜಿತರಾಗಿದ್ದರು ಮತ್ತು ೧ ತಿಂಗಳ ರಜೆ ತೆಗೆದುಕೊಂಡು ಮನೆಗೆ ಬಂದಿದ್ದರು. ಕೃಷ್ಣಾ ಅವರಿಗೆ ೨ ಮಕ್ಕಳಿದ್ದು, ಚಿಕ್ಕ ಮಗುವಿಗೆ ಕೇವಲ ೩ ದಿನಗಳ ಹಿಂದೆ ಜನ್ಮ ನೀಡಿತ್ತು. ಅವರ ಪತ್ನಿ ಇನ್ನೂ ಆಸ್ಪತ್ರೆಯಲ್ಲಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಕೃಷ್ಣಾ ಹರಿದ್ವಾರಕ್ಕೆ ಕಾವಡ್ ಯಾತ್ರೆಗೆ ಹೋಗಿದ್ದಾಗ ಅಲ್ಲಿ ಕೆಲವು ಯುವಕರೊಂದಿಗೆ ಜಗಳವಾಗಿತ್ತು. ಆ ಕಾರಣದಿಂದಲೇ ಅವರ ಹತ್ಯೆ ನಡೆದಿದೆ ಎಂದು ಅಂದಾಜಿಸಲಾಗಿದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ