
ಹರಿದ್ವಾರ (ಉತ್ತರಾಖಂಡ) – ಇಲ್ಲಿ ಮಸೀದಿಯ ಅಕ್ರಮ ನಿರ್ಮಾಣಕ್ಕೆ ಸಂಬಂಧಿಸಿದಂತೆ ದೊಡ್ಡ ವಿವಾದ ಭುಗಿಲೆದ್ದಿದೆ. ಹರಿದ್ವಾರ ಜಿಲ್ಲೆಯ ಲಕ್ಸರ್ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ದೊಡ್ಡ ಮಸೀದಿಯ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಈ ಮಸೀದಿಯ ನಿರ್ಮಾಣಕ್ಕಾಗಿ ಆಡಳಿತದಿಂದ ಅನುಮತಿ ಪಡೆಯಲಾಗಿರಲಿಲ್ಲ. ಆದ್ದರಿಂದ, ಮುಖ್ಯಮಂತ್ರಿ ಪುಷ್ಕರ ಸಿಂಗ ಧಾಮಿ ಅವರು ಈ ಮಸೀದಿಯ ಅಕ್ರಮ ನಿರ್ಮಾಣವನ್ನು ನಿಲ್ಲಿಸುವಂತೆ ಆದೇಶಿಸಿದರು.
1. ಮುಖ್ಯಮಂತ್ರಿ ಧಾಮಿ ಅವರು ಜಿಲ್ಲಾಧಿಕಾರಿ ಮಯೂರ ದೀಕ್ಷಿತ ಅವರಿಗೆ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಆದೇಶಿಸಿದರು. ಈ ಹಿಂದೆ ಕೂಡ ಧಾಮಿ ಸರಕಾರವು ಹಲವು ಅಕ್ರಮ ಮದರಸಾಗಳು ಮತ್ತು ಮಜಾರಗಳ ಮೇಲೆ ಕ್ರಮ ಕೈಗೊಂಡಿದೆ. ಸ್ಥಳೀಯ ನಾಗರಿಕರು ಈ ಕೆಲಸವು ನಿಯಮಬಾಹಿರ ಎಂದು ಆರೋಪಿಸಿದ್ದರಿಂದ ವಿವಾದ ಪ್ರಾರಂಭವಾಯಿತು.
2. ಹರಿದ್ವಾರದ ಜಿಲ್ಲಾಧಿಕಾರಿ ಮಯೂರ ದೀಕ್ಷಿತ ಅವರು, ಸಂಬಂಧಪಟ್ಟ ಅಧಿಕಾರಿಗಳು ಮಸೀದಿ ನಿರ್ವಹಣಾ ಸಮಿತಿಯೊಂದಿಗೆ ಸಭೆ ನಡೆಸಿ ವಿಚಾರಣೆ ನಡೆಸಿದ್ದಾರೆ ಎಂದು ತಿಳಿಸಿದರು. ಈ ಪ್ರಕರಣದಲ್ಲಿ ಉಪಜಿಲ್ಲಾಧಿಕಾರಿಗಳು ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲಿದ್ದಾರೆ.
ಸಂಪಾದಕೀಯ ನಿಲುವುಇಂತಹ ನಿರ್ಮಾಣ ಕಾರ್ಯ ಕೈಕೊಳ್ಳಲು ಧೈರ್ಯ ಮಾಡುವವರಿಗೆ ಭಯ ಹುಟ್ಟಿಸುವಂತಹ ಶಿಕ್ಷೆ ಆಗುವ ಆವಶ್ಯಕತೆಯಿದೆ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!