
ಶ್ರೀನಗರ – ಪೂಂಚ್ನ ಗಡಿ ನಿಯಂತ್ರಣ ರೇಖೆಯ ಬಳಿ ಗಡಿಯೊಳಗೆ ನುಸುಳಲು ಯತ್ನಿಸುತ್ತಿದ್ದ ಪಾಕ್ ಬೆಂಬಲಿತ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ. ಭಾರತೀಯ ಸೇನೆ ನೀಡಿದ ಮಾಹಿತಿಯ ಪ್ರಕಾರ, ಜುಲೈ 29 ರ ತಡರಾತ್ರಿ ದೇಗ್ವಾರ್ ಸೆಕ್ಟರ್ನ ಮಾಲ್ಡಿವೆಲನ್ ಪ್ರದೇಶದ ಗಡಿಯಲ್ಲಿ ನಿಯೋಜಿಸಲಾಗಿದ್ದ ಸೈನಿಕರಿಗೆ ಕೆಲವು ಅನುಮಾನಾಸ್ಪದ ಚಲನ-ವಲನಗಳು ಕಂಡುಬಂದವು. ನಂತರ ಗುಂಡಿನ ಚಕಮಕಿ ಪ್ರಾರಂಭವಾಯಿತು. ಈ ಭಯೋತ್ಪಾದಕರಿಂದ 3 ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಮ್ಮು-ಕಾಶ್ಮೀರ ಪೊಲೀಸರು ಮತ್ತು ಭಾರತೀಯ ಸೇನೆ ಜಂಟಿಯಾಗಿ ಈ ಕಾರ್ಯಾಚರಣೆಯನ್ನು ನಡೆಸಿದವು. ಈ ಕಾರ್ಯಾಚರಣೆಗೆ ‘ಆಪರೇಷನ್ ಶಿವಶಕ್ತಿ’ ಎಂದು ಹೆಸರಿಡಲಾಗಿತ್ತು. ಪಾಕ್ ಬೆಂಬಲಿತ ಭಯೋತ್ಪಾದಕರು ಅಡಗಿರುವ ಬಗ್ಗೆ ಗೌಪ್ಯ ಮಾಹಿತಿ ಲಭಿಸಿದ ನಂತರ ಭಾರತೀಯ ಸೇನೆ ಅವರನ್ನು ಪತ್ತೆಹಚ್ಚುವ ಕಾರ್ಯಾಚರಣೆ ನಡೆಸಿತು.
ಎರಡು ದಿನಗಳ ಹಿಂದೆ, ಭಾರತೀಯ ಸೇನೆ ಮತ್ತು ಪೊಲೀಸರು ಜಂಟಿಯಾಗಿ ನಡೆಸಿದ ‘ಆಪರೇಷನ್ ಮಹಾದೇವ’ ಅಡಿಯಲ್ಲಿ ಶ್ರೀನಗರದ ದಾಚಿಗಾಮ್ ರಾಷ್ಟ್ರೀಯ ಉದ್ಯಾನವನದ ಸಮೀಪವಿರುವ ಹರ್ವಾನ್ ಪ್ರದೇಶದಲ್ಲಿ ಮೂವರು ಪಾಕಿಸ್ತಾನಿ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿತ್ತು. ಈ ಮೂವರು ಭಯೋತ್ಪಾದಕರು ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದರು.
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!