
ದರಭಾಂಗ (ಬಿಹಾರ) – ಜಿಲ್ಲೆಯ ಹಾಟ್ಗಾಚಿ ಗ್ರಾಮದಲ್ಲಿ ಹಿಜ್ಬುಲ್ ರೆಹಮಾನ್ ಅಲಿಯಾಸ್ ಆರ್ಜು ಎಂಬ ಮುಸ್ಲಿಂ ಯುವಕನಿಂದ ಹಿಂದೂ ಯುವತಿಯೊಬ್ಬಳ ಅಪಹರಣದ ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿದೆ. ಈ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ. ಇದರಲ್ಲಿ ರೆಹಮಾನ್ ದ್ವಿಚಕ್ರ ವಾಹನದಲ್ಲಿ ಬಂದು ಬಲವಂತವಾಗಿ ಯುವತಿಯನ್ನು ಅಪಹರಿಸುವುದು ಕಂಡುಬರುತ್ತದೆ. ಸಂತ್ರಸ್ತೆ ಕೂಗುತ್ತಾ, ವಿರೋಧಿಸುತ್ತಾಳೆ; ಆದರೆ ಆರೋಪಿ ಅವಳ ಕೈ ಹಿಡಿದು ಅವಳೊಂದಿಗೆ ಪರಾರಿಯಾಗುತ್ತಾನೆ. ಈ ಘಟನೆಯಿಂದ ಗ್ರಾಮದಲ್ಲಿ ಕೋಮು ಉದ್ವಿಗ್ನತೆ ಸೃಷ್ಟಿಯಾಗಿದೆ. ಈ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
೧. ಸಂತ್ರಸ್ತ ಯುವತಿಯ ತಂದೆಯು, ಜುಲೈ ೨೭ ರಂದು ಹಿಜ್ಬುಲ್ ರೆಹಮಾನ್ ಅವರ ವೀಳ್ಯದೆಲೆ ಅಂಗಡಿ ಮತ್ತು ಮನೆಗೆ ಬಂದು ಗಲಾಟೆ ಮಾಡಿದ್ದನು. ಸಂತ್ರಸ್ತ ಯುವತಿಯ ತಂದೆ ಜುಲೈ ೨೮ ರಂದು ಅಲಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು; ಆದರೆ ಪೊಲೀಸರಿಂದ ಯಾವುದೇ ಕಠಿಣ ಕ್ರಮ ಕೈಗೊಂಡಿರಲಿಲ್ಲ, ಎಂದು ಹೇಳಿದದ್ದಾರೆ.
೨. ಜುಲೈ ೨೯ ರಂದು, ಹಿಂದೂ ಯುವತಿ ಅಂಗಡಿಯಿಂದ ಮನೆಗೆ ಹಿಂತಿರುಗುತ್ತಿದ್ದಾಗ, ರೆಹಮಾನ್ ಅವಳನ್ನು ಬಲವಂತವಾಗಿ ದ್ವಿಚಕ್ರ ವಾಹನದಲ್ಲಿ ಕೂರಿಸಿ ಅಪಹರಿಸಿದನು.
೩. ದರ್ಭಂಗಾ ಪೊಲೀಸ್ ಅಧೀಕ್ಷಕ ಜಗನ್ನಾಥ ರೆಡ್ಡಿ ಅವರ ನಿರ್ದೇಶನದಂತೆ, ಉಪ ಪೊಲೀಸ್ ಅಧೀಕ್ಷಕ ಅಶುತೋಷ ಕುಮಾರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಯಿತು. ಈ ತಂಡವು ತಕ್ಷಣವೇ ಕಾರ್ಯಪ್ರವೃತ್ತವಾಗಿ ಹಿಜ್ಬುಲ್ ರೆಹಮಾನ್ನನ್ನು ಬಂಧಿಸಿದೆ.
ಸಂಪಾದಕೀಯ ನಿಲುವುಇಂತಹವರಿಗೆ ಭಾರತೀಯ ಕಾನೂನಿನ ಭಯವಿಲ್ಲದ್ದರಿಂದ ಶರಿಯತ್ ಕಾನೂನಿನ ಪ್ರಕಾರ ಶಿಕ್ಷೆ ವಿಧಿಸುವಂತೆ ಸಂತ್ರಸ್ತೆಯ ಕುಟುಂಬಸ್ಥರು ಬೇಡಿಕೆ ಇಟ್ಟರೆ ಆಶ್ಚರ್ಯಪಡಬೇಕಾಗಿಲ್ಲ! |
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಕೇರಳಕ್ಕೆ ಮುಂಗಾರು ಮಳೆಯು ಆಗಮನ !
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ
ಬರಕತ ಉಲ್ಲಾ ವಿಶ್ವವಿದ್ಯಾಲಯದ ಹೆಸರು ‘ವಾಗ್ದೇವಿ ಭೋಜಪಾಲ ವಿಶ್ವವಿದ್ಯಾಲಯ’ ಎಂದು ಬದಲಾಗಲಿದೆ !
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!