
ನವದೆಹಲಿ – ನ್ಯಾಯಾಲಯದ ನಿರ್ಧಾರ ನಿರಾಶಾದಾಯಕವಾಗಿದೆ ಮತ್ತು ಕೇಂದ್ರ ಸರಕಾರ ಹಾಗೂ ಮಹಾರಾಷ್ಟ್ರದ ಫಡ್ನವೀಸ್ ಸರಕಾರ ಈ ನಿರ್ಧಾರದ ವಿರುದ್ಧ ಮೇಲಿನ ನ್ಯಾಯಾಲಯದಲ್ಲಿ ಸವಾಲು ಹಾಕುತ್ತವೆಯೇ? ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎ.ಐ.ಎಂ.ಐ.ಎಂ.) ಮುಖ್ಯಸ್ಥ ಮತ್ತು ಸಂಸದ ಅಸಾದುದ್ದೀನ್ ಓವೈಸಿ ಅವರು ಪ್ರತಿಕ್ರಿಯೆ ನೀಡುವಾಗ ಪ್ರಶ್ನಿಸಿದ್ದಾರೆ. 2008ರ ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ ನೀಡಿದ ತೀರ್ಪಿನ ಬಗ್ಗೆ ಅವರು ಮಾತನಾಡುತ್ತಿದ್ದರು.
ಓವೈಸಿ ಮಾತು ಮುಂದುವರೆಸಿ, ರಾಷ್ಟ್ರೀಯ ತನಿಖಾ ದಳ ಈ ಪ್ರಕರಣದಲ್ಲಿ ಉದ್ದೇಶಪೂರ್ವಕವಾಗಿ ಕಳಪೆ ತನಿಖೆ ನಡೆಸಿದೆ, ಇದರಿಂದಾಗಿ ಇಂದು ಈ ಜನರನ್ನು ನಿರಪರಾಧಿಗಳೆಂದು ಬಿಡುಗಡೆ ಮಾಡಲಾಗಿದೆ. 2016ರಲ್ಲಿ ಈ ಪ್ರಕರಣದ ಅಂದಿನ ಸರಕಾರಿ ನ್ಯಾಯವಾದಿ ರೋಹಿಣಿ ಸಾಲಿಯನ್ ಅವರು ಸಾರ್ವಜನಿಕವಾಗಿ, ರಾಷ್ಟ್ರೀಯ ತನಿಖಾ ದಳವು ಆರೋಪಿಗಳ ಬಗ್ಗೆ ಸೌಮ್ಯ ನಿಲುವು ತೆಗೆದುಕೊಳ್ಳುವಂತೆ ತಮಗೆ ತಿಳಿಸಿತ್ತು ಎಂದು ಹೇಳಿದ್ದರು. 2017ರಲ್ಲಿ ದಳವು ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ನಿರಪರಾಧಿಗಳೆಂದು ಬಿಡುಗಡೆ ಮಾಡಲು ಪ್ರಯತ್ನಿಸಿತು. ಅದೇ ವ್ಯಕ್ತಿ 2019ರಲ್ಲಿ ಭಾಜಪ ಸಂಸದರಾದರು. ರಾಷ್ಟ್ರೀಯ ತನಿಖಾ ದಳ ಮತ್ತು ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳನ್ನು ಅವರ ದೋಷಪೂರಿತ ತನಿಖೆಗೆ ಹೊಣೆಗಾರರನ್ನಾಗಿ ಮಾಡಲಾಗುತ್ತದೆಯೇ? ಈ ಪ್ರಶ್ನೆಗೆ ನಮ್ಮೆಲ್ಲರಿಗೂ ಉತ್ತರ ತಿಳಿದಿದೆ. ಭಯೋತ್ಪಾದನೆಯ ವಿರುದ್ಧ ಇದು ಕಠಿಣವಾದ ಮೋದಿ ಸರಕಾರವಿದೆ. ಭಾಜಪವು ಭಯೋತ್ಪಾದಕ ಆರೋಪಿಯೊಬ್ಬರನ್ನು ಸಂಸದರನ್ನಾಗಿ ಮಾಡಿದೆ ಎಂದು ಜಗತ್ತು ನೆನಪಿನಲ್ಲಿಟ್ಟುಕೊಳ್ಳುತ್ತದೆ. (ಓವೈಸಿಯಂತಹ ಕಟ್ಟರ್ ಮತಾಂಧ ಮುಸ್ಲಿಂ ನಾಯಕರಿಗೆ ಹಿಂದುತ್ವನಿಷ್ಠ ಕಾರ್ಯಕರ್ತರು, ನಾಯಕರು ಅಥವಾ ಸಂತರು ಭಯೋತ್ಪಾದಕರಂತೆ ಕಾಣುತ್ತಾರೆ! ಅಂತಹ ನಾಯಕರನ್ನು ಎಷ್ಟು ಖಂಡಿಸಿದರೂ ಕಡಿಮೆಯೇ! – ಸಂಪಾದಕರು)
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ